ಮಾಜಿ ಸಿಎಂ ಯಡಿಯೂರಪ್ಪಗೆ ಪಕ್ಷದಲ್ಲಿ ಮಣೆ: ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನ ನೀಡಿ ಹೈಕಮಾಂಡ್ ಆದೇಶ ಹೊರಡಿಸಿದೆ. 
ಬಿ ಎಸ್ ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನ ನೀಡಿ ಹೈಕಮಾಂಡ್ ಆದೇಶ ಹೊರಡಿಸಿದೆ. 

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಅವರು ನಿರ್ಗಮಿಸಿದ ಮೇಲೆ ಪಕ್ಷದಲ್ಲಿ ಪ್ರಮುಖ ಚಟುವಟಿಕೆಯಿಂದ ದೂರವಿದ್ದರು. ಪಕ್ಷದಲ್ಲಿ ಅವರ ಮುಂದಿನ ಸ್ಥಾನಮಾನವೇನು ಎಂಬ ವಿಷಯ ಆಗಾಗ ಚರ್ಚೆಗೆ ಬರುತ್ತಿತ್ತು. ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅದಿನ್ನೂ ಮಹತ್ವ ಪಡೆದಿದೆ.

ಇದೀಗ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್  ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸಮಿತಿಯಲ್ಲಿ 15 ಮಂದಿ ಸದಸ್ಯರಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಇತರರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com