ಸಿದ್ದರಾಮಯ್ಯ ಸತ್ಯಹರಿಶ್ಚಂದ್ರರಾ?: ಸಿಎಂ ಬೊಮ್ಮಾಯಿ ಪ್ರಶ್ನೆ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡ್ತಾ ಇದ್ದಾರೆ. ಇಷ್ಟು ದಿನ ನಿಖರವಾಗಿ ಯಾವೊಬ್ಬ ಸಚಿವರ ಮೇಲೆ ಆರೋಪ‌ ಮಾಡಿರಲಿಲ್ಲ ಈಗ ಸಚಿವ ಮುನಿರತ್ನ ಅವರ ವಿರುದ್ಧ‌ ಆರೋಪ‌ ಮಾಡಿದ್ದಾರೆ...
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ

ಬೆಂಗಳೂರು: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಒಂದು ವರ್ಷದಿಂದ ಆರೋಪ ಮಾಡ್ತಾ ಇದ್ದಾರೆ. ಇಷ್ಟು ದಿನ ನಿಖರವಾಗಿ ಯಾವೊಬ್ಬ ಸಚಿವರ ಮೇಲೆ ಆರೋಪ‌ ಮಾಡಿರಲಿಲ್ಲ ಈಗ ಸಚಿವ ಮುನಿರತ್ನ ಅವರ ವಿರುದ್ಧ‌ ಆರೋಪ‌ ಮಾಡಿದ್ದಾರೆ ಎಂದು ಮುಖ್ಯಮಂತ್ರಿ  ಬಸವರಾಜ ಎಸ್. ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಮುನಿರತ್ನ ಅವರು  ಕೆಂಪಣ್ಣ ಮೇಲೆ ಮಾನನಷ್ಟ ಮೊಕದ್ದಮೆ ಹಾಕುತ್ತೇವೆ ಎಂದಿದ್ದಾರೆ. ಅವರೇ ಮುಂದಿನ ಹೋರಾಟ ಮಾಡ್ತಾರೆ ಎಂದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಅವರೇನು ಸತ್ಯಹರಿಶ್ಚಂದ್ರರಾ? ಈ ಹಿಂದೆ ಭ್ರಷ್ಟಾಚಾರ ಆಗಿತ್ತು ಅಂತಾರೆ. ಹಾಗಾದರೆ ಇಷ್ಟು ದಿನ ಕಣ್ಣಿಗೆ ಎಣ್ಣೆ ಬಿಟ್ಕೊಂಡು ಇದ್ರಾ? ಎಂದು ಪ್ರಶ್ನಿಸಿದರು.

ಸುಮ್ನೆ ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ. ಕೆಂಪಣ್ಣ ನೀಡಿದ್ದ ಸಲಹೆಯಂತೆ ಕೆಲಸ‌ ಮಾಡಿಸ್ತಾ ಇದ್ದೇವೆ. ಅವರು ನನ್ನ ಭೇಟಿ ಮಾಡಿದ್ದರು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದು ಭ್ರಷ್ಟ ಸರ್ಕಾರ, ಮುಖ್ಯಮಂತ್ರಿ ಬೊಮ್ಮಾಯಿ ಅವರಿಂದ ಹಿಡಿದು ಸಚಿವರೆಲ್ಲರೂ ಭ್ರಷ್ಟರು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದರು. ಅಲ್ಲದೆ ಭ್ರಷ್ಟಾಚಾರ ಎಲ್ಲಾ ಕಾಲದಲ್ಲೂ ಇತ್ತು. ಆದ್ರೆ ಬಿಜೆಪಿ ಸರ್ಕಾರದಲ್ಲಿ ಶರವೇಗದಲ್ಲಿ ಕಮಿಷನ್ ಹೆಚ್ಚುತ್ತಿದೆ. ಇದನ್ನ ರಾಜ್ಯ ಗುತ್ತಿಗೆದಾರರು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com