social_icon

'ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಪರ್ಯಾಯ ನಾಯಕ ಕಾಣುತ್ತಿಲ್ಲ': ಮಲ್ಲಿಕಾರ್ಜುನ ಖರ್ಗೆ

ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

Published: 27th August 2022 12:36 PM  |   Last Updated: 27th August 2022 01:33 PM   |  A+A-


Mallikarjuna Kharge

ಮಲ್ಲಿಕಾರ್ಜುನ ಖರ್ಗೆ

Posted By : Sumana Upadhyaya
Source : PTI

ಬೆಂಗಳೂರು: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಪಕ್ಷವನ್ನು ಮುನ್ನಡೆಸುವವರು ಇಡೀ ದೇಶಕ್ಕೆ ಚಿರಪರಿಚಿತನಾಗಿರಬೇಕು. ಕನ್ಯಾಕುಮಾರಿಯಿಂದ ಹಿಡಿದು ಕಾಶ್ಮೀರದವರೆಗೆ, ಪಶ್ಚಿಮ ಬಂಗಾಳದಿಂದ ಹಿಡಿದು ಗುಜರಾತ್ ವರೆಗೆ ಪರಿಚಿತನಾಗಿರಬೇಕು ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿರುವ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಇಡೀ ದೇಶಕ್ಕೆ ಚಿರಪರಿಚಿತರು. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಂದ ಸ್ವೀಕೃತವಾಗಿರುವ ನಾಯಕರು, ಅವರು ಬಿಟ್ಟರೆ ಬೇರೊಬ್ಬ ನಾಯಕರು ಸದ್ಯಕ್ಕೆ ಪಕ್ಷದಲ್ಲಿಲ್ಲ ಎಂದು ನಿನ್ನೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. 

ಹಿಂದೆ ಸೋನಿಯಾ ಗಾಂಧಿಯವರನ್ನು ಪಕ್ಷದ ನಾಯಕರೆಲ್ಲರೂ ಕರೆದುಕೊಂಡು ಬಂದು ಪಕ್ಷ ಮುನ್ನಡೆಸಬೇಕೆಂದು ಒತ್ತಾಯಿಸಿದ್ದನ್ನು ನೆನಪಿಸಿಕೊಂಡ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯವರನ್ನು ಅದೇ ರೀತಿ ಪಕ್ಷವನ್ನು ಮುನ್ನಡೆಸಿ ಹೋರಾಡಿ ಎಂದು ಮನವಿ ಮಾಡಿಕೊಂಡರು. 

ಇದನ್ನೂ ಓದಿ: ಗುಲಾಂ ನಬಿ ಆಜಾದ್ ಡಿಎನ್‌ಎ 'ಮೋದಿ-ಫೈಡ್' ಆಗಿದೆ: ಜೈರಾಮ್ ರಮೇಶ್

ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಬೇರೊಬ್ಬರು ಕಾಣಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧರಿಲ್ಲ ಎಂಬ ವರದಿಗಳ ಕುರಿತು, ಖರ್ಗೆ ಅವರು "ಪಕ್ಷಕ್ಕಾಗಿ, ದೇಶಕ್ಕಾಗಿ, ಆರ್‌ಎಸ್‌ಎಸ್-ಬಿಜೆಪಿ ವಿರುದ್ಧ ಹೋರಾಡಲು ಮತ್ತು ದೇಶವನ್ನು ಉಳಿಸಿಕೊಳ್ಳಲು ಅಧಿಕಾರ ವಹಿಸಿಕೊಳ್ಳುವಂತೆ ಅವರನ್ನು ವಿನಂತಿಸಿಕೊಳ್ಳಲಾಗುವುದು ಎಂದರು. 

ಪಕ್ಷದ ಮುಂಬರುವ "ಭಾರತ್ ಜೋಡೋ ಯಾತ್ರೆ" ಬಗ್ಗೆಯೂ ಉಲ್ಲೇಖಿಸಿದ ಖರ್ಗೆ, 'ಜೋಡೋ ಭಾರತ್'ಗೆ ರಾಹುಲ್ ಗಾಂಧಿ ಅಗತ್ಯವಿದೆ ಎಂದು ಹೇಳಿದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು (CWC) ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾಗಿದ್ದು, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯ ದಿನಾಂಕಗಳ ವೇಳಾಪಟ್ಟಿಯನ್ನು ಅನುಮೋದಿಸಲು ನಾಳೆ ವರ್ಚುವಲ್ ಸಭೆ ನಡೆಸಲಿದೆ. ಸಿಡಬ್ಲ್ಯೂಸಿ ಸಭೆಯ ಅಧ್ಯಕ್ಷತೆಯನ್ನು ಸೋನಿಯಾ ಗಾಂಧಿ ವಹಿಸಲಿದ್ದಾರೆ.


Stay up to date on all the latest ರಾಜಕೀಯ news
Poll
K Annamalai

ಎನ್‌ಡಿಎಯಿಂದ ಹೊರಬರುವ ಎಐಎಡಿಎಂಕೆ ನಿರ್ಧಾರವು 2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಲ್ಲಿ ಬಿಜೆಪಿ ಪಕ್ಷದ ಸಾಧನೆ ಮೇಲೆ ಪರಿಣಾಮ ಬೀರಲಿದೆಯೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • A D Janaj

    Is the political leadership is patented to Gandhi family only? Mr. Mallikarjun Kharge. If you support Rahul Gandhi then your son will be survived.
    1 year ago reply
flipboard facebook twitter whatsapp