'ಚಾರ್ಲಿ'ಗೆ ಕಣ್ಣೀರು ಹಾಕುವ ಸಿಎಂಗೆ ರಾಜ್ಯದ ಜನತೆಗೆ ನೆರವಾಗುವ ಹೃದಯವಂತಿಕೆ ತೋರಲು ಕಷ್ಟವೇ?: ಕಾಂಗ್ರೆಸ್

ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಗ 5 ರೂ. ಮತ್ತು ಡೀಸೆಲ್ ಗೆ 3 ರೂಪಾಯಿ ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.
ಕಾಂಗ್ರೆಸ್ ಸಾಂದರ್ಭಿಕ ಚಿತ್ರ
ಕಾಂಗ್ರೆಸ್ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮಹಾರಾಷ್ಟ್ರ ಸರ್ಕಾರ ಪೆಟ್ರೋಲ್ ಗ 5 ರೂ. ಮತ್ತು ಡೀಸೆಲ್ ಗೆ 3 ರೂಪಾಯಿ ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.

ಚಾರ್ಲಿ 777 ಸಿನಿಮಾ ವೀಕ್ಷಿಸಿದ ಮುಖ್ಯಮಂತ್ರಿ ಬೊಮ್ಮಾಯಿ, ಅಗಲಿದ ತಮ್ಮ  ಪ್ರೀತಿಯ ನಾಯಿಯನ್ನು  ನೆನೆದು ಭಾವುಕರಾಗಿದ್ದರು. ಇದಕ್ಕೆ ವ್ಯಂಗ್ಯವಾಡಿರುವ ಕಾಂಗ್ರೆಸ್, ಚಾರ್ಲಿಗೆ ಕಣ್ಣೀರು ಹಾಕುವ ತಮಗೆ ರಾಜ್ಯದ ಜನತೆಗೆ ನೆರವಾಗುವ ಕನಿಷ್ಠ ಹೃದಯ ವಂತಿಕೆ ತೋರಲು ಕಷ್ಟವೇ? ಎಂದು ಪ್ರಶ್ನಿಸಿದೆ. 

ಮಹಾರಾಷ್ಟ್ರದ ಬಿಜೆಪಿ ಬೆಂಬಲಿತ ಸರ್ಕಾರ ಇಂಧನ ತೆರಿಗೆ ಇಳಿಸಿದೆ ಎಂದಾದರೆ ಕರ್ನಾಟಕದಲ್ಲಿ ಏಕೆ ಸಾಧ್ಯವಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಎಂದು ಪ್ರಶ್ನೆ ಮಾಡಿದೆ.

ಪಿಎಸ್ ಐ ಹಗರಣ ಕೊಲೆಗಿಂತಲೂ ಮಿಗಿಲಾದದ್ದು, ಕೊಲೆಯಾದರೆ ಒಬ್ಬನ ಪ್ರಾಣ ಹೋಗುತ್ತದೆ. ಇಲ್ಲಿ 50,000 ಜನರು ತೊಂದರೆಗೆ ಸಿಲುಕಿದ್ದಾರೆ. ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ರಾಜ್ಯದ 50,000 ಯುವಕರ ಜೀವನವನ್ನು ರಾಜ್ಯ ಬಿಜೆಪಿ ಸರ್ಕಾರ ಕೊಲೆ ಮಾಡಿದೆ. ಈ ಕೊಲೆಗೆ ಅಂದಿನ ಗೃಹ ಸಚಿವರೇ ಹೊಣೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com