ದೇವೇಗೌಡರು, ಕುಮಾರಣ್ಣಂಗೆ ಅವಕಾಶ ಮಾಡಿಕೊಟ್ಟಿದ್ದೀರಿ, ಸೇವೆ ಮಾಡಲು ನನಗೂ ಒಂದು ಚಾನ್ಸ್ ಕೊಡಿ: ಡಿಕೆ ಶಿವಕುಮಾರ್

ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ರಾಮನಗರ: ದೇವೇಗೌಡರು, ಕುಮಾರಸ್ವಾಮಿಗೆ ಅವಕಾಶ ಮಾಡಿಕೊಟ್ಟಿದ್ದೀರಿ. ತಾಯಿಯ ಸನ್ನಿಧಿಯಿಂದ ಕೇಳುತ್ತಿದ್ದೇನೆ, ನನಗೂ ಚಾನ್ಸ್ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ನನಗೆ ಹೂವಿನ ಹಾರ ಬೇಡ. ನಾನು ಯಾರನ್ನು ನಿಲ್ಲಿಸುತ್ತೆನೆ ಅವರಿಗೆ ಸಹಕಾರ ಕೊಡಬೇಕು. ನನಗೆ ಆಶೀರ್ವಾದ ಮಾಡಬೇಕು. ರಾಜ್ಯದಲ್ಲಿ ಸೇವೆಯನ್ನ ಮಾಡುವ ಅವಕಾಶ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ನಿಮ್ಮ ಜಿಲ್ಲೆಯ ಮಗನಿಗೆ ಕೊಡಬೇಕೆಂಬ ಆಸೆಯಿದ್ದರೆ ಮಾಡಬೇಕು. ದೇಶದಲ್ಲಿ ಈಗ ಪ್ರತಿಯೊಂದು ವಸ್ತುವಿನ ಬೆಲೆ ಗಗನಕ್ಕೆ ಏರಿದೆ. ಪ್ರತಿಯೊಬ್ಬರ ಬದುಕಿನಲ್ಲಿ ಸರ್ಕಾರ ಕತ್ತರಿ ಹಾಕುತ್ತಿದೆ. ನಿಮ್ಮ ಸೇವೆ ಮಾಡಲು ನನಗೆ ಒಂದು ಅವಕಾಶ ಮಾಡಿಕೊಡಿ ಎಂದು ಡಿಕೆ ಶಿವಕುಮಾರ್ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com