ಅತಿ ಬುದ್ಧಿವಂತರ ಜೊತೆ ಕೆಲಸ ಮಾಡೋದು ಕಷ್ಟ, ವಿಶ್ವಾಸ ಇಲ್ಲಾಂದ್ರೆ ತಗೊಂಡು ಹೋಗು: ಪ್ರತಾಪ್ ಸಿಂಹ ವಿರುದ್ಧ ಸಿಎಂ ಬೊಮ್ಮಾಯಿ ಸಿಡಿಮಿಡಿ!

ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿಎಂ ಜೊತೆ ಪ್ರತಾಪ್ ಸಿಂಹ
ಸಿಎಂ ಜೊತೆ ಪ್ರತಾಪ್ ಸಿಂಹ

ಬೆಂಗಳೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ದಸರಾ ಮಹೋತ್ಸವಕ್ಕೆ ಸಂಬಂಧಪಟ್ಟಂತೆ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ ತಮ್ಮ ಕ್ಷೇತ್ರಕ್ಕೆ ಸಂಬಂಧ ಪಟ್ಟ ದಾಖಲೆಯೊಂದನ್ನು ಸಿಎಂಗೆ ನೀಡಿದ್ದಾರೆ. ಅದನ್ನು ಓದುವಾಗಲೇ ನಿಮ್ಮ ಜೊತೆಗೆ ಫೋಟೋ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಇದಕ್ಕೆ ಕೋಪಗೊಂಡ ಬೊಮ್ಮಾಯಿ ವಿಶ್ವಾಸ ಇಲ್ಲಾಂದ್ರೆ ಇದನ್ನು ವಾಪಸ್ ತಗೊಂಡು ಹೋಗು ಎಂದು ಗುಡುಗಿದ್ದಾರೆ.

ಬೊಮ್ಮಾಯಿ ಅವರ ಕೋಪ  ಕಂಡ ಪ್ರತಾಪ್ ಸಿಂಹ, ನಿಮ್ಮ ಜೊತೆ ಒಂದು ಫೋಟೋ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ, ಇದರಿಂದ ಮತ್ತಷ್ಟು ಅಸಮಾಧಾನಗೊಂಡ ಸಿಎಂ ಬೊಮ್ಮಾಯಿ, 'ನನ್ ಜೊತೆ ಫೋಟೊ ಬೇಡ, ಅತಿ ಬುದ್ಧಿವಂತರ ಜೊತೆ ಕೆಲಸ ಮಾಡೋದೆ ಕಷ್ಟ ಎಂದು ಗುಡುಗಿದ್ದಾರೆ.

ಮುಖ್ಯಮಂತ್ರಿಯವರ ಸುದ್ದಿಗೋಷ್ಠಿ ಮುಗಿಯುತ್ತಿದ್ದಂತೆ ಸಿಎಂ ಅವರ ಹಿಂದಿನಿಂದ ಹೋದ ಪ್ರತಾಪ್ ಸಿಂಹ ಮತ್ತೆ ಪೇಪರ್ ಹಿಡಿದು ಕೇಳಿಕೊಂಡಿದ್ದರೂ ಬೊಮ್ಮಾಯಿ ಅವರು ಮಾತನಾಡಿಸದೇ ಹೊರಟು ಹೋಗಿದ್ದಾರೆ.

ಈ ಘಟನೆ ನಂತರ  ಕಬಿನಿಗೆ ಬಾಗಿನ ಅರ್ಪಿಸಲು ಬಸವರಾಜ ಬೊಮ್ಮಾಯಿ ಮೈಸೂರಿಗೆ ಆಗಮಿಸಿದ್ದರು. ಚಾಮುಂಡಿ ಬೆಟ್ಟ, ಕಬಿನಿ ಹಾಗೂ ಕೆಆರ್‌ಎಸ್‌ ಮೂರು ಕಡೆ ನಡೆಸ ಸಿಎಂ ಕಾರ್ಯಕ್ರಮಗಳಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದಿರುವುದು ಭಿನ್ನಾಭಿಪ್ರಾಯ ಮೂಡಿರುವ ಅನುಮಾನ ಮೂಡಿಸಿದೆ. ಸಂಸದ ಪ್ರತಾಪ್ ಸಿಂಹ ಖುದ್ದು ಹಾಜರಾಗಿ ಸಿಎಂ ಅವರನ್ನು ಸ್ವಾಗತಿಸಬೇಕಾಗಿತ್ತು, ಆದರೆ ಬಾಗಿನ ಅರ್ಪಣೆ ಸೇರಿದಂತೆ ಯಾವ ಕಾರ್ಯಕ್ರಮದಲ್ಲೂ ಪ್ರತಾಪ್ ಸಿಂಹ ಭಾಗವಹಿಸಿರಲಿಲ್ಲ.

ನರೇಂದ್ರ ಮೋದಿಯನ್ನು ಮೈಸೂರಿಗೆ ಕರೆ ತರುವ ವಿಚಾರದಲ್ಲೂ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ರಾಮದಾಸ್ ನಡುವೆ ಕ್ರೆಡಿಟ್ ವಾರ್ ನಡೆದಿತ್ತು. ಆದರೆ, ಮೈಸೂರಿಗೆ ಮೋದಿ ಬಂದಾಗ ಪ್ರತಾಪ್ ಸಿಂಹ ಅವರನ್ನು ಕ್ಯಾರೆ ಎಂದಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com