ಹುಬ್ಬಳ್ಳಿ: ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್. ಪಕ್ಷ ಪೂಜೆನೂ ಮಾಡ್ತಿನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ಒಕ್ಕಲಿಗರ ಬಗ್ಗೆ ಯಾವುದೇ ತಪ್ಪು ಹೇಳಿಕೆ ನೀಡಿಲ್ಲ. ನಂಗು ನಮ್ಮ ಜಾತಿಯವರಿಗಿಂತ ಒಕ್ಕಲಿಗರು ಬಹಳ ಆತ್ಮಿಯರಿದ್ದಾರೆ. ಸ್ವಾಮೀಜಿಯವರು ಅಸಮಾಧಾನ ಮಾಡಿಕೊಂಡಿದ್ದು ನಂಗೆ ಗೊತ್ತಿಲ್ಲ. ಅವರೇನಾದರು ಹೇಳಿದರೆ ನಾನು ಮಾತನಾಡಬಹುದಿತ್ತು ಎಂದರು.
ನನ್ನ ಬಾಯಿ ಮುಚ್ಚೋದು ನಾನು ಸತ್ತ ಮೇಲೆನೆ. ನನ್ನ ಬಾಯಿ ಮುಚ್ಚೋಕೆ ಸಾಧ್ಯ ಇಲ್ಲ. ನಾನು ಪಕ್ಷ ಪೂಜೆನೂ ಮಾಡ್ತಿನಿ, ಅದರ ಜೊತೆ ವ್ಯಕ್ತಿ ಪೂಜೆನೂ ಮಾಡ್ತಿನಿ. ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಅಂತೆಯೇ ರಾಜಕೀಯದಲ್ಲಿ ಲೆವೆಲ್ ಗುರುತಿಸೋದು ಜನ. ನಮ್ಮ ಲೆವೆಲ್ ಜನ ಹೇಳಬೇಕು ಎಂದು ಡಿ ಕೆ ಶಿವಕುಮಾರ ಅವರಿಗೆ ಟಾಂಗ್ ನೀಡಿದ ಜಮೀರ್ ಎಐಸಿಸಿಯಿಂದಲೂ ನಂಗೆ ಸೂಚನೆ ಬಂದಿಲ್ಲ. ನಂಗ್ಯಾಕೆ ನೋಟಿಸ್ ನೀಡ್ತಾರೆ. ನಾನೇನು ತಪ್ಪು ಮಾತನಾಡಿದ್ದೇನೆ ಎಂದು ಕೇಳಿದರು.
Advertisement