ಮಂಡ್ಯ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್ ಕುಮಾರಸ್ವಾಮಿ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಎಂಬುದಾಗಿ ಯಾರು ಹೇಳಿದರು ಎಂದು ಪ್ರಶ್ನಿಸಿದರು.
ನಿಖಿಲ್ 30-40 ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುತ್ತಾರೆ. ಆದರೆ ಅವರು ವಿಧಾನ ಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ- ಕಾಂಗ್ರೆಸ್ ನಿಂದ ಜೆಡಿಎಸ್ ಪಕ್ಷವನ್ನು ನಿರ್ನಾಮ ಮಾಡಲು ಆಗಲ್ಲ. ಈ ಬಾರಿ ಕಾಂಗ್ರೆಸ್, ಬಿಜೆಪಿಗಿಂತ ನಮ್ಮ ಪಕ್ಷ 15-20 ಹೆಚ್ಚಿನ ಸ್ಥಾನ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
Advertisement