ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ಹಿಜಾಬ್ ವಿವಾದಕ್ಕೆ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?
ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ.
Published: 15th March 2022 02:01 PM | Last Updated: 15th March 2022 02:11 PM | A+A A-

ಪ್ರಿಯಾಂಕಾ ಗಾಂಧಿ
ಬೆಂಗಳೂರು: ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ ಕಾಂಗ್ರೆಸ್ ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು ಎಂದಿರುವ ಬಿಜೆಪಿ, ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು. ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ? ಎಂದು ಪ್ರಶ್ನಿಸಿದೆ.
ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಕೆಲ ಮತೀಯ ಶಕ್ತಿಗಳು ಅನಗತ್ಯವಾಗಿ ಪ್ರಚೋದನೆ ನೀಡಿದವು. ಇದರಿಂದ ವಿದ್ಯಾರ್ಥಿನಿಯರ ಶಿಕ್ಷಣ ವಿಚಾರದಲ್ಲಿ ಗೊಂದಲ ಸೃಷ್ಟಿಯಾಯ್ತು. ಮಕ್ಕಳ ಭವಿಷ್ಯದ ವಿಚಾರದಲ್ಲೂ ರಾಜಕೀಯ ಬೆರೆಸಿದ ಕಾಂಗ್ರೆಸ್ ಧೋರಣೆಗೆ ಈಗ ಉತ್ತರ ಸಿಕ್ಕಿದೆ.' ಎಂದು ಬಿಜೆಪಿ ಹೇಳಿದೆ.
ಹಿಜಾಬ್ ವಿಚಾರದಲ್ಲಿ ಕಾಂಗ್ರೆಸ್, ಎಸ್ಡಿಪಿಐ, ಸಿಎಫ್ಐ ಮೂಗು ತೂರಿಸಿದ್ದರಿಂದ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಯ್ತು. ಕಾಂಗ್ರೆಸ್ ಪಕ್ಷದ ಇಬ್ಬಗೆ ನೀತಿ, ಮತ ರಾಜಕಾರಣಕ್ಕಾಗಿ ಒಡೆದಾಳುವ ನೀತಿಯ ಪರಿಣಾಮವಾಗಿ ಸಾವಿರಾರು ವಿದ್ಯಾರ್ಥಿನಿಯರು ಪರೀಕ್ಷೆಯಿಂದ ಹಿಂದೆ ಸರಿದರು. ಇದಕ್ಕೆಲ್ಲಾ ಕಾಂಗ್ರೆಸ್ ನೇರ ಹೊಣೆ ಎಂದು ಬಿಜೆಪಿ ಆರೋಪಿಸಿದೆ.
ಇದನ್ನೂ ಓದಿ: ಬಿಕಿನಿಯಾದರೂ ಧರಿಸಲಿ, ಮುಸುಕಾದರೂ ಧರಿಸಲಿ, ಜೀನ್ಸ್ ಆದರೂ ಹಾಕಲಿ: ಹಿಜಾಬ್ ವಿವಾದಕ್ಕೆ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ
ಶಾಲಾ ಹಂತದಲ್ಲೇ ಬಗೆಹರಿಯಬಹುದಾದ ಹಿಜಾಬ್ ವಿಚಾರವನ್ನು ನ್ಯಾಯಾಲಯದವರೆಗೆ ಎಳೆದು ತರುವ ಅಗತ್ಯವಿರಲಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರ ಜಾರಿಗೊಳಿಸಿದ ಸಮವಸ್ತ್ರ ನೀತಿಯಲ್ಲಿ ತಪ್ಪಿಲ್ಲ. ಸಮವಸ್ತ್ರ ಮೂಲಭೂತ ಹಕ್ಕುಗಳ ಮೇಲಿನ ಸಮಂಜಸ ನಿರ್ಬಂಧ ಎಂದು ಕೋರ್ಟ್ ಅಭಿಪ್ರಾಯಪಟ್ಟಿರುವುದು ಸ್ವಾಗತಾರ್ಹ ಎಂದು ಬಿಜೆಪಿ ಹೇಳಿದೆ.
ಹಿಜಾಬ್ ವಿಚಾರದಲ್ಲಿ ವಿದ್ಯಾರ್ಥಿನಿಯರ ಪರ ವಾದ ಮಾಡುವುದಕ್ಕೆ @INCKarnataka ತನ್ನದೇ ಪಕ್ಷದ ನ್ಯಾಯವಾದಿಗಳನ್ನು ನಿಯೋಜನೆ ಮಾಡಿತ್ತು.
— BJP Karnataka (@BJP4Karnataka) March 15, 2022
ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶ ಪ್ರಯತ್ನ ಇದಾಗಿತ್ತು.
ಉದಯೋನ್ಮುಖ ವಿಫಲ ನಾಯಕಿ ಪ್ರಿಯಾಂಕಾ ವಾದ್ರಾ ಕೂಡಾ ಚಿತಾವಣೆ ನೀಡಿದ್ದನ್ನು ಮರೆಯಲು ಸಾಧ್ಯವೇ?#YesToUniform_NoToHijab
ಈ ಪ್ರಕರಣದಲ್ಲಿ ಹಿಜಾಬ್ ಒಳಗಿರುವ ಮತ ಗಟ್ಟಿಗೊಳಿಸಲು ಯತ್ನಿಸಿದ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ ಎಂದಿರುವ ಬಿಜೆಪಿ, ಸಿದ್ದರಾಮಯ್ಯ ಅವರು ‘ಹಿಜಾಬ್ ಧರಿಸುವುದು ಮೂಲಭೂತ ಹಕ್ಕು’ ಎಂದು ಪ್ರತಿಪಾದಿಸಿದ್ದರು. ಈಗ ನ್ಯಾಯಾಲಯವೇ, ಹಿಜಾಬ್ ಇಸ್ಲಾಂ ಮತದ ಅವಿಭಾಜ್ಯ ಅಂಗವಲ್ಲ ಎಂಬ ತೀರ್ಪು ನೀಡಿದೆ. ಕಾಂಗ್ರೆಸ್ ತನ್ನ ವೈಯುಕ್ತಿಕ ರಾಜಕೀಯ ಲಾಭಕ್ಕಾಗಿ, ಹಿಜಾಬ್ ವಿವಾದಕ್ಕೆ ಪುಷ್ಟಿ ನೀಡಿತು. ವಿದ್ಯಾರ್ಥಿನಿಯರು ತರಗತಿ ಮತ್ತು ಪರೀಕ್ಷೆ ಹಾಜರಾಗದಂತಹ ವಾತಾವರಣ ನಿರ್ಮಿಸಿತ್ತು. ಈಗ ನ್ಯಾಯಾಲಯದ ತೀರ್ಪು ಬಂದಿದೆ. ಇನ್ನಾದರೂ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳ ಭವಿಷ್ಯ ಜೊತೆ ಚೆಲ್ಲಾಟವಾಡದಿರಲಿ ಎಂದು ಹೇಳಿದೆ.