ಓಲೈಕೆಗೂ ಒಂದು ಮಿತಿಯಿರುತ್ತೆ, ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ನಡುವಿನ ವ್ಯತ್ಯಾಸ ಅರಿತುಕೊಳ್ಳಿ!
ಹಿಜಾಬ್ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಬೆಂಬಲ ವ್ಯಕ್ತ ಪಡಿಸಿರುವುದಕ್ಕೆ ಬಿಜೆಪಿ ಹರಿಹಾಯ್ದಿದೆ, ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ ಎಂದು ಪ್ರಶ್ನಿಸಿದೆ.
Published: 26th March 2022 09:51 AM | Last Updated: 26th March 2022 01:20 PM | A+A A-

ಸಿದ್ದರಾಮಯ್ಯ
ಬೆಂಗಳೂರು: ಹಿಜಾಬ್ ವಿವಾದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಬೆಂಬಲ ವ್ಯಕ್ತ ಪಡಿಸಿರುವುದಕ್ಕೆ ಬಿಜೆಪಿ ಹರಿಹಾಯ್ದಿದೆ, ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ ಎಂದು ಪ್ರಶ್ನಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಹಿಜಾಬ್ ವಿಚಾರದಲ್ಲಿ ಹಿಜಾಬ್ ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದರು, ನ್ಯಾಯಾಲಯ ಇವರ ಹೇಳಿಕೆಗೆ ವಿರುದ್ಧವಾದ ತೀರ್ಪು ನೀಡಿತು.ರಾಷ್ಟ್ರಧ್ವಜವೇ ಇರದ ಸ್ಥಂಭದಲ್ಲಿ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂಬ ಸುಳ್ಳು ಹೇಳಿದರು ಎಂದು ಹೇಳಿದೆ.
ಮಾನ್ಯ ಸಿದ್ದರಾಮಯ್ಯನವರೇ, ಓಲೈಕೆಗೂ ಒಂದು ಮಿತಿ ಎನ್ನುವುದಿರುತ್ತದೆ. ನೀವು ಅದೆಲ್ಲವನ್ನೂ ದಾಟಿ ಸಾಗುತ್ತಿದ್ದೀರಿ. ಮೊದಲನೆಯದಾಗಿ ಹಿಜಾಬ್, ದುಪ್ಪಟ್ಟ, ಮುಂಡಾಸು, ಪೇಟ ಇವುಗಳ ನಡುವಿನ ವ್ಯತ್ಯಾಸವನ್ನು ಮೊದಲು ಅರಿತುಕೊಳ್ಳಿ. ಹಿಜಾಬ್ ನಿಷೇಧಿಸಿಲ್ಲ, ತರಗತಿಯೊಳಗೆ ಹಿಜಾಬ್ಗೆ ಅವಕಾಶ ನಿರಾಕರಿಸಲಾಗಿದೆ, ಅಷ್ಟೇ. #ಬುರುಡೆರಾಮಯ್ಯ ಎಂದು ಟ್ವೀಟ್ ಮಾಡಿದೆ.
ಸುಳ್ಳುಗಳ ಹೊರತಾಗಿ ನಿಮ್ಮ ರಾಜಕೀಯ ನಡೆಯುವುದಿಲ್ಲ, ಅಲ್ವೇ ಸಿದ್ದರಾಮಯ್ಯ?
— BJP Karnataka (@BJP4Karnataka) March 25, 2022
ಹಿಜಾಬ್ ವಿಚಾರದಲ್ಲಿ ಹಿಜಾಬ್ ಮೂಲಭೂತ ಹಕ್ಕು ಎಂದು ಪ್ರತಿಪಾದಿಸಿದರು, ನ್ಯಾಯಾಲಯ ಇವರ ಹೇಳಿಕೆಗೆ ವಿರುದ್ಧವಾದ ತೀರ್ಪು ನೀಡಿತು.
ರಾಷ್ಟ್ರಧ್ವಜವೇ ಇರದ ಸ್ಥಂಭದಲ್ಲಿ ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂಬ ಸುಳ್ಳು ಹೇಳಿದರು.#ಬುರುಡೆರಾಮಯ್ಯ
ಹಿಜಾಬ್ಗೆ ಎಲ್ಲಿ ವಿರೋಧ ವ್ಯಕ್ತವಾಗಿದೆ ಎನ್ನುವುದರ ಬಗ್ಗೆಯೇ ಸಿದ್ದರಾಮಯ್ಯ ಅವರಿಗೆ ಗೊಂದಲವಿದೆ. ಹಾದಿಬೀದಿಯಲ್ಲಿ, ಕಾಲೇಜಿನ ಆವರಣದಲ್ಲಿ ಹಿಜಾಬ್ ನಿಷೇಧಿಸಿಲ್ಲ. ವಸ್ತ್ರಸಂಹಿತೆಯ ಪ್ರಕಾರ ತರಗತಿಯಲ್ಲಿ ಅವಕಾಶ ನೀಡಿಲ್ಲ. ಹಿಜಾಬ್ ಒಳಗೆ ಅಡಗಿರುವ ʼಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ ಎಂದು ಲೇವಡಿ ಮಾಡಿದೆ.
ಇದನ್ನೂ ಓದಿ: ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಂಡ್ರೆ ಪ್ರಶ್ನಿಸ್ತೀರಾ?: ನನ್ನ ಹೇಳಿಕೆ ತಿರುಚಲಾಗಿದೆ- ಸಿದ್ದರಾಮಯ್ಯ ಸ್ಪಷ್ಟನೆ
ಹಿಜಾಬ್ಗೂ ಹಿಂದೂ ಸ್ವಾಮೀಜಿಗಳಿಗೂ ಏನು ಸಂಬಂಧ ಸಿದ್ದರಾಮಯ್ಯನವರೇ? ಮತಬ್ಯಾಂಕ್ ರಾಜಕಾರಣಕ್ಕೆ ಮುಸ್ಲಿಂ ಸಮುದಾಯವನ್ನು ಓಲೈಕೆ ಮಾಡುವ ಭರದಲ್ಲಿ ಸಿದ್ದರಾಮಯ್ಯ ಅವರು ಪ್ರತಿ ಹಂತದಲ್ಲೂ ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡುತ್ತಿದ್ದಾರೆ. ಇದು ಖಂಡನೀಯ.
ಕಾಂಗ್ರೆಸ್ ಪಕ್ಷಕ್ಕೆ ಹಿಂದೂಗಳು ಎಂದರೆ ಏಕೆ ಅಸಹನೆ? ಚುನಾವಣೆ ಹತ್ತಿರ ಬಂದಾಗಲೆಲ್ಲ ʼಸಾಫ್ಟ್ ಹಿಂದುತ್ವʼ ಎಂಬ ಗುರಾಣಿ ಹಿಡಿಯುವ ಕಾಂಗ್ರೆಸ್ ಉಳಿದ ಸಮಯದಲ್ಲಿ ಹಿಂದೂ ವಿರೋಧಿ ನೀತಿಗಳನ್ನೇ ಅನುಸರಿಸುತ್ತದೆ ಎಂದು ಲೇವಡಿ ಮಾಡಿದೆ.
ಹಿಜಾಬ್ಗೆ ಎಲ್ಲಿ ವಿರೋಧ ವ್ಯಕ್ತವಾಗಿದೆ ಎನ್ನುವುದರ ಬಗ್ಗೆಯೇ @siddaramaiah ಅವರಿಗೆ ಗೊಂದಲವಿದೆ.
— BJP Karnataka (@BJP4Karnataka) March 25, 2022
ಹಾದಿಬೀದಿಯಲ್ಲಿ, ಕಾಲೇಜಿನ ಆವರಣದಲ್ಲಿ ಹಿಜಾಬ್ ನಿಷೇಧಿಸಿಲ್ಲ. ವಸ್ತ್ರಸಂಹಿತೆಯ ಪ್ರಕಾರ ತರಗತಿಯಲ್ಲಿ ಅವಕಾಶ ನೀಡಿಲ್ಲ.
ಹಿಜಾಬ್ ಒಳಗೆ ಅಡಗಿರುವ ʼಅಲ್ಪʼ ಮತಕ್ಕಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.#ಬುರುಡೆರಾಮಯ್ಯ