social_icon

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಹಲವು ಮಹತ್ತರ ಬದಲಾವಣೆಗಳು?

ಇಂದು ಮೇ 2 ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಂದಿನ ವರ್ಷ ಏಪ್ರಿಲ್-ಮೇಯಲ್ಲಿ ವಿಧಾನಸಭೆ ಚುನಾವಣೆಯಿದ್ದು ಈ ಹೊತ್ತಿನಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ, ಬಿಜೆಪಿಯಲ್ಲಿ ಹಲವು ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಸ್ ಸಂತೋಷ್ ನೀಡಿದ್ದಾರೆ.

Published: 02nd May 2022 08:37 AM  |   Last Updated: 02nd May 2022 02:11 PM   |  A+A-


Amit Shah

ಅಮಿತ್ ಶಾ

Posted By : sumana
Source : The New Indian Express

ಬೆಂಗಳೂರು: ಇಂದು ಮೇ 2 ಸೋಮವಾರ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಮುಂದಿನ ವರ್ಷ ಏಪ್ರಿಲ್-ಮೇಯಲ್ಲಿ ವಿಧಾನಸಭೆ ಚುನಾವಣೆಯಿದ್ದು ಈ ಹೊತ್ತಿನಲ್ಲಿ ರಾಜ್ಯ ಸಚಿವ ಸಂಪುಟದಲ್ಲಿ, ಬಿಜೆಪಿಯಲ್ಲಿ ಹಲವು ಮಹತ್ತರ ಬದಲಾವಣೆಗಳಾಗುವ ಸಾಧ್ಯತೆಯಿದೆ. ಈ ಸುಳಿವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಸ್ ಸಂತೋಷ್ ನೀಡಿದ್ದಾರೆ.

ಅಮಿತ್ ಶಾ ಭೇಟಿ ಸಹಜ ಎಂದು ಹೇಳಲಾಗುತ್ತಿದೆ. ಖೇಲೋ ಇಂಡಿಯಾದ ಸಮಾರೋಪ ಸಮಾರಂಭದಲ್ಲಿ ನಾಳೆ ಭಾಗವಹಿಸಲಿದ್ದು, ಬಸವ ಜಯಂತಿ ಕಾರ್ಯಕ್ರಮದಲ್ಲಿ ಕೂಡ ಭಾಗಿಯಾಗಲಿದ್ದಾರೆ. ಆದರೆ ಅವರು ಬರುವುದು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಪ್ರಮುಖ ಬದಲಾವಣೆ ಮಾಡಲು ಎಂಬುದು ಇಲ್ಲಿ ವಿಶೇಷ. 

ದೀರ್ಘ ಸಮಯದಿಂದ ವಿಳಂಬವಾಗಿಕೊಂಡು ಬಂದಿರುವ ಸಚಿವ ಸಂಪುಟ ಪುನಾರಚನೆ ಮತ್ತು ಪಕ್ಷದ ಸ್ಥಿತಿಗತಿ ಇಲ್ಲಿ ಮುಖ್ಯವಾಗಿದೆ. ಬೊಮ್ಮಾಯಿಯವರು ತಮ್ಮ ಅಧಿಕೃತ ನಿವಾಸದಲ್ಲಿ ಅಮಿತ್ ಶಾ ಅವರಿಗೆ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಿದ್ದಾರೆ.

ಚುನಾವಣೆಗೆ ಇನ್ನು ಒಂದು ವರ್ಷವೂ ಇಲ್ಲದಿರುವುದರಿಂದ ಈ ಬಾರಿ ಶಾ ಅವರ ಭೇಟಿ ನಿರ್ಣಾಯಕವಾಗಲಿದೆ. ಅನೇಕ ಹೊಸ ಮುಖಗಳಿಗೆ ನಾಯಕತ್ವ ನೀಡಬಹುದು, ಸರ್ಕಾರವು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ನಾಯಕರೊಬ್ಬರು ಹೇಳುತ್ತಾರೆ. ಎಂಟರಿಂದ ಹತ್ತು ಮಂದಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ, ಹೊಸ ಮುಖಗಳಿಗೆ ಮನ್ನಣೆ ಬಿಜೆಪಿಯ ಶಕ್ತಿ: ಬಿ ಎಲ್ ಸಂತೋಷ್; ಮಹತ್ವದ ಬದಲಾವಣೆಗೆ ಮುನ್ಸೂಚನೆಯೇ?

ನಾಯಕತ್ವ ಬದಲಾವಣೆಯೇ ಬಿಜೆಪಿಯ ಶಕ್ತಿ, ಹೊಸ ಮುಖಗಳನ್ನು ಪರಿಚಯಿಸುವ ಮೂಲಕ ದೆಹಲಿ ಮತ್ತು ಗುಜರಾತ್‌ನಲ್ಲಿ ಕಾರ್ಪೊರೇಷನ್ ಚುನಾವಣೆಗಳನ್ನು ಗೆಲ್ಲುವ ಮೂಲಕ ನಾವು ಆ ಪ್ರಯೋಗದಲ್ಲಿ ಯಶಸ್ವಿಯಾಗಿದ್ದೇವೆ. ಹಾಲಿ ಶಾಸಕರು ಮತ್ತು ಅವರ ಕುಟುಂಬದ ಸದಸ್ಯರನ್ನು ದೂರವಿಟ್ಟು ಹೊಸ ಮುಖಗಳನ್ನು ಪರಿಚಯಿಸಿದ್ದೇವೆ ಎಂದು ಸಂತೋಷ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದು, ಬಿಜೆಪಿ ವಲಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ.

ಇದೇ ವಿಚಾರವಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಕೂಡ ಮಾತನಾಡಿದ್ದಾರೆ. “ನಾವು ಎಲ್ಲಿ ದುರ್ಬಲರಾಗಿದ್ದೇವೋ ಅಲ್ಲಿ ಬದಲಾವಣೆ ಅನಿವಾರ್ಯ, ಪಕ್ಷವು ದುರ್ಬಲ ನಾಯಕರನ್ನು ಉತ್ತೇಜಿಸುವುದಿಲ್ಲ. ನಮ್ಮದೇ ಆದ ಕರ್ನಾಟಕ ಮಾದರಿ ಇದೆ. ಗುಜರಾತ್ ಅಥವಾ ಪಂಜಾಬ್ ಮಾದರಿ ಇರುವುದಿಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಬೊಮ್ಮಾಯಿ ಆರ್ ಎಸ್ಎಸ್ ನಿಂದ ಬಂದವ್ನಲ್ಲ, ಅದ್ಕೆ ಬದಲಾಯಿಸಲು ಹೊರಟಿದ್ದಾರೆ, ರಾಜ್ಯದಲ್ಲಿ ವೀಕ್ ಸಿಎಂ ಮತ್ತು ಗೃಹ ಸಚಿವರಿದ್ದಾರೆ: ಸಿದ್ದರಾಮಯ್ಯ

ಸಂತೋಷ್ ಹೇಳಿಕೆಗೆ ಸಹಮತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅವರು ಹೇಳಿದ್ದು ಸರಿ ಮತ್ತು ಸತ್ಯ ಎಂದಿದ್ದಾರೆ. ಸಂಜೆ ನಂತರ ಬೊಮ್ಮಾಯಿ ಅವರು ಸಂಪುಟ ಸಹೋದ್ಯೋಗಿಗಳಾದ ಗೋವಿಂದ ಕಾರಜೋಳ, ಬಿ ಶ್ರೀರಾಮುಲು, ಬಿ ಸಿ ನಾಗೇಶ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರೊಂದಿಗೆ ಪಕ್ಷದ ಕಚೇರಿಯಲ್ಲಿ ಸಂತೋಷ್ ಅವರನ್ನು ಭೇಟಿ ಮಾಡಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಮೂಲಗಳ ಪ್ರಕಾರ, ಬಿಜೆಪಿಯ ಆಂತರಿಕ ಸಮೀಕ್ಷೆಯು ರಾಜ್ಯದಲ್ಲಿ ಸರ್ಕಾರ ಮತ್ತು ಪಕ್ಷ ಎರಡರಲ್ಲೂ ಬದಲಾವಣೆಯಾಗದ ಹೊರತು ಪಕ್ಷಕ್ಕೆ ಅಧಿಕಾರವನ್ನು ಉಳಿಸಿಕೊಳ್ಳುವುದು ಕಠಿಣ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರೆಸಿದ್ದಾರೆ. ಕೆಲವು ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲು ಕೆಲವು ದಿನಗಳ ಹಿಂದೆ ದೆಹಲಿಗೆ ತೆರಳಿದ್ದರು ಎಂದು ಮೂಲಗಳು ತಿಳಿಸಿವೆ.


Stay up to date on all the latest ರಾಜಕೀಯ news
Poll

ಸಿದ್ದರಾಮಯ್ಯ ಸರ್ಕಾರದಿಂದ ಐದು ಗ್ಯಾರಂಟಿಗಳ ಜಾರಿ: ಇತರ ರಾಜ್ಯಗಳ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗುವುದೇ?


Result
ಹೌದು
ಇಲ್ಲ

Comments(1)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Bhimanna

    ಯಾರೆ ಕೇಂದ್ರದಿಂದ ಆಗಲಿ ಬಂದು ಹೋದರು ಎನು ಪ್ರಯೋಜನ ಇಲ್ಲ ಇದು ಮಾತ್ರ ಸತ್ಯ ನೋಡಿ ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ನಡೆಯುವ ಚುನವಾಣೆ ಗೆಲ್ಲುವ ಶಕ್ತಿ ಅವರ ವ್ಯಕ್ತಿತ್ವದ ಮೇಲೆ ಪ್ರಭಾವ ಬಿರುತ್ತದೆ, ಹಿಂದೆ ಸಂಪೂರ್ಣ 5 ವರ್ಷಗಳು ಆಡಳಿತ ನಡೆಸಿದರು, ಯಾವ Party ಗೆ ಬಹುಮತ ಬರುವುದಿಲ್ಲ ,ಆದರೆ ಮತ್ತೆ ಕುದುರೆ ವ್ಯಾಪಾರ ರಾಜಕಾರಣ ,ಇಲ್ಲಾಂದರೆ ಸುಲಾಲಿತವಾಗಿ ನಡೆದು ಚುನಾವಣೆ ಆದ ಮೇಲೆ ಯಾರಿಗೆ ಇಷ್ಠವಾದ ವ್ಯಕ್ತಿ ಬೇಕು ಅವರು ಅರಸನನ್ನು ಆಯ್ಕೆಮಾಡಿ ಹೋಗುವುವರು.
    1 year ago reply
flipboard facebook twitter whatsapp