social_icon

ರಾಜ್ಯ ಬಿಜೆಪಿ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ: ಸಿದ್ದರಾಮಯ್ಯ ವಾಗ್ದಾಳಿ

ರಾಜ್ಯ ಬಿಜೆಪಿ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ ಒತ್ತಿದ್ದಾರೆ, ನಿನ್ನೆ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಬೊಮ್ಮಾಯಿ ಸರ್ಕಾರಕ್ಕೆ ಶಹಬ್ಬಾಸ್ ಗಿರಿ ಕೊಟ್ಟು ಹೋಗಿದ್ದಾರೆ.

Published: 04th May 2022 01:20 PM  |   Last Updated: 04th May 2022 02:23 PM   |  A+A-


Siddaramaiah

ಸಿದ್ದರಾಮಯ್ಯ

Posted By : Shilpa D
Source : Online Desk

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಅಕ್ರಮಕ್ಕೆ ಕೇಂದ್ರ ಗೃಹ ಸಚಿವರ ಅಂಕಿತ ಒತ್ತಿದ್ದಾರೆ, ನಿನ್ನೆ ಅಮಿತ್ ಶಾ ಬೆಂಗಳೂರಿಗೆ ಬಂದು ಹೋಗಿದ್ದಾರೆ. ಬೊಮ್ಮಾಯಿ ಸರ್ಕಾರಕ್ಕೆ ಶಹಬ್ಬಾಸ್ ಗಿರಿ ಕೊಟ್ಟು ಹೋಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮುಳುವಾಗಿರುವ ಪಿಎಸ್ಐ ನೇಮಕಾತಿ ಅಕ್ರಮ, 40% ಕಮಿಷನ್ ಹಗರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ  ಕಾಮನ್  ಮ್ಯಾನ್ ಸರ್ಕಾರವೆಂದು ಅರುಣ್ ಸಿಂಗ್ ಹೇಳಿದ್ದಾರೆ. 40 ಪರ್ಸೆಂಟ್ ಕಮಿಷನ್ ಸರ್ಕಾರಕ್ಕೆ ಸಹಮತ ನೀಡಿದ್ದಾರೆ. ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರ ಸರ್ಕಾರ ಮುದ್ರೆ ಒತ್ತಿದೆ ಎಂದು ದೂರಿದ್ದಾರೆ.

40 ಪರ್ಸೆಂಟ್ ಕಮಿಷನ್ ಸರ್ಕಾರವೆಂದು ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಸಂತೋಷ್ ಪಾಟೀಲ್ ಹೇಳಿದ್ದರು. ಮಠಕ್ಕೆ ಬಿಡುಗಡೆಯಾದ ಅನುದಾನಕ್ಕೂ 40 ಪರ್ಸೆಂಟ್ ಕೊಡಬೇಕು. ರಾಜ್ಯ ಸರ್ಕಾರದ ವಿರುದ್ಧ ಸ್ವಾಮೀಜಿ ಆರೋಪ ಮಾಡಿದ್ದರು. ಬಿಬಿಎಂಪಿ ವಿರುದ್ಧವೂ 40 ಪರ್ಸೆಂಟ್ ಆರೋಪ ಕೇಳಿಬಂದಿತ್ತು. ಗೋಶಾಲೆಗೆ ಬಿಡುಗಡೆಯಾದ ಹಣಕ್ಕೂ 40 ಪರ್ಸೆಂಟ್ ಕೊಡಬೇಕು. ಸರ್ಕಾರದ ವಿರುದ್ಧ ಇಷ್ಟೆಲ್ಲಾ ಆರೋಪ ಕೇಳಿಬಂದರೂ ಬೆಂಗಳೂರಿಗೆ ಬಂದಿದ್ದ ಕೇಂದ್ರ ಬಿಜೆಪಿ ನಾಯಕರಿಂದ ಮೆಚ್ಚುಗೆ ನೀಡಿದ್ದಾರೆ. ಇದರ ಅರ್ಥ ರಾಜ್ಯ ಸರ್ಕಾರದ ಅಕ್ರಮಕ್ಕೆ ಕೇಂದ್ರ ಸಹಮತವಿದೆ ಎಂದು ಸಿದ್ದರಾಮಯ್ಯ ಹೇಳಿದರು.

ನಮ್ಮ ಸರ್ಕಾರದ ವಿರುದ್ಧ 10 ಪರ್ಸೆಂಟ್ ಸರ್ಕಾರವೆಂದು ಹೇಳಿದ್ರು. ಯಾವುದೇ ದಾಖಲೆ ಇಲ್ಲದೆ ಮೋದಿ ಆರೋಪ ಮಾಡಿದ್ದರು. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಬಗ್ಗೆ ಪ್ರಧಾನಿ ಮೋದಿಗೆ ಗುತ್ತಿಗೆದಾರರ ಸಂಘ ಪತ್ರ ಬರೆದು ತಿಳಿಸಿದ್ದರು. ಆದರೆ, ಪ್ರಧಾನಿ ಮೋದಿ ಈವರೆಗೆ ಯಾವುದೇ ಕ್ರಮಕೈಗೊಂಡಿಲ್ಲ. ನಾನು ತಿನ್ನಲ್ಲ ತಿನ್ನಲು ಬಿಡಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದರು. ರಾಜ್ಯ ಸರ್ಕಾರದ 40 ಪರ್ಸೆಂಟ್ನಲ್ಲಿ ಕೇಂದ್ರಕ್ಕೆ ಪಾಲಿದೆ ಅಂದರ್ಥ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಸಂಪನ್ಮೂಲಗಳನ್ನ ಗುಡಿಸಿ ಗುಂಡಾಂತರ ಮಾಡಿ ಬೆಳ್ಳಿ ತಟ್ಟೆಯಲ್ಲಿ ಭೋಜನ ಸವಿಯುವವರಿಗೆ, ಹಸಿವು ಸೂಚ್ಯಂಕದಲ್ಲಿ 117ನೇ ಸ್ಥಾನಕ್ಕೆ ಕುಸಿದಿರೋದು ಕಾಣುತ್ತಾ?

ಕಾಂಗ್ರೆಸ್ ಸರ್ಕಾರದ ವಿರುದ್ಧ ಶೇ 10ರಷ್ಟು ಕಮಿಷನ್ ಆರೋಪ ಮಾಡಿದ ಬಿಜೆಪಿ ಈಗ 40% ಕಮಿಷನ್ ಗಳಿಸುತ್ತಿದೆ. ಈ ಬಗ್ಗೆ ತನಿಖೆ ನಡೆಸುತ್ತಿಲ್ಲ.  ಆರೋಪಿತರನ್ನು ಬಂಧಿಸುವಲ್ಲಿ ವಿಳಂಬ ಮಾಡುವ ಮೂಲಕ ತನಿಖೆ ಹಾದಿ ದಿಕ್ಕು ತಪ್ಪಿಸಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್ ಪಾಲ್ ವರ್ಗಾವಣೆ ಮಾಡುವ ಮೂಲಕ ಅಕ್ರಮದ ತನಿಖೆ ಕುಂಠಿತಗೊಳಿಸಲಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಅಷ್ಟೇ ಇದು ದೊಡ್ಡ ಹಗರಣವಲ್ಲ ಎಂದಿದ್ದಾರೆ. ಭ್ರಷ್ಟಾಚಾರ ನಡೆದಿರುವುದನ್ನು ಒಪ್ಪಿಕೊಳ್ಳುತ್ತಿಲ್ಲ. ಇಬ್ಬರು ಅಧಿಕಾರಿಗಳು ಅಕ್ರಮದಲ್ಲಿ ಭಾಗಿಯಾಗಿದ್ದರೂ ಇವರ ವಿರುದ್ಧ ಎಫ್ಐಆರ್ ಹಾಕಿ ತನಿಖೆ ಏಕೆ ನಡೆಸಿಲ್ಲ. ಅಕ್ರಮದಲ್ಲಿ ಭಾಗಿಯಾಗಿರುವ ಮಧ್ಯವರ್ತಿಗಳು ತಾವೇ ಕಿಂಗ್ ಪಿನ್ ಗಳು ಎಂದು ಬಿಂಬಿಸುತ್ತಿದ್ದಾರೆ. ಅಸಲಿ ಕಿಂಗ್ ಪಿನ್ ಗಳು ಯಾರು ಎಂಬುದನ್ನು ಮುಚ್ಚಿ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಈಗ ತನಿಖೆ ನಡೆಸುತ್ತಿದ್ದಾರೆ. ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕೂಡಲೇ ವಜಾಗೊಳಿಸಬೇಕು. ಕೇಂದ್ರ ಗೃಹಸಚಿವ ಅಮಿತ್ ಶಾ ಇಂಥವರ ಬೆನ್ನು ತಟ್ಟಿಹೋಗಿದ್ದಾರೆ. ಇವರ ನಡೆ ಗಮನಿಸಿದೆ ಅಕ್ರಮಕ್ಕೆ ಕೇಂದ್ರದ ಬೆಂಬಲವಿದೆಯಾ? ಎಂದು ಪ್ರಶ್ನೆ ಮಾಡಿದ ಸಿದ್ದರಾಮಯ್ಯ, ಇಬ್ಬರು ಅಧಿಕಾರಿಗಳನ್ನು ವರ್ಗಾವಣೆ ಮಾಡಿದರೆ ಸಾಲದು. ಇವರ ವಿರುದ್ಧ ಎಫ್​ಐಆರ್​ ದಾಖಲಿಸಿ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.


Stay up to date on all the latest ರಾಜಕೀಯ news
Poll
New parliament building

ಹೊಸ ಸಂಸತ್ ಕಟ್ಟಡದ ಉದ್ಘಾಟನೆಯನ್ನು ಬಹಿಷ್ಕರಿಸುವ ಹಲವಾರು ವಿರೋಧ ಪಕ್ಷಗಳ ನಿರ್ಧಾರವು ಸಮರ್ಥನೀಯವೇ?


Result
ಹೌದು
ಇಲ್ಲ

Comments

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

flipboard facebook twitter whatsapp