
ಬಸವರಾಜ ಹೊರಟ್ಟಿ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಮತ್ತು ಪರಿಷತ್ ಸದಸ್ಯತ್ವಕ್ಕೆ ಬಸವರಾಜ ಹೊರಟ್ಟಿ ಸೋಮವಾರ ರಾಜೀನಾಮೆ ನೀಡಿದ್ದು, ನಾಳೆ ಬಿಜೆಪಿ ಸೇರುವುದಾಗಿ ಘೋಷಿಸಿದ್ದಾರೆ.
ಇಂದು ವಿಧಾನಸೌಧದ ಸಭಾಪತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಹೊರಟ್ಟಿ, ಸಭಾಪತಿ ಸ್ಥಾನಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು. ಅಲ್ಲದೆ ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗುವುದಾಗಿ ತಿಳಿಸಿದರು.
ಇದನ್ನು ಓದಿ: ಬಿಜೆಪಿ ಸೇರ್ಪಡೆ ಬಗ್ಗೆ ಎಂದಿಗೂ ಆಲೋಚಿಸಿರಲಿಲ್ಲ: ಬಸವರಾಜ ಹೊರಟ್ಟಿ
ವಿಧಾನ ಪರಿಷತ್ ಸಚಿವಾಲಯದ ಆಡಳಿತದಲ್ಲಿ ಪ್ರಾಮಾಣಿಕ ಪಾರದರ್ಶಕತೆಗೆ ಆದ್ಯತೆ ನೀಡಿದ್ದೇನೆ. ಕಲುಷಿತವಾದ ರಾಜಕಾರಣದಲ್ಲಿ ನಮ್ಮಂತವರಿಗೆ ನೋವು ಆಗಿದೆ. ಆದರೆ ಮನಸ್ಸು ಇಲ್ಲದೆ ಇದ್ದರೂ ರಾಜಕೀಯದಲ್ಲಿ ಇರಬೇಕಾಗುತ್ತದೆ ಎಂದರು.
ಬಿಜೆಪಿ ಸೇರ್ಪಡೆ ಸಂಬಂಧಿಸಿದಂತೆ ಯಾವುದೇ ಷರತ್ತು ಹಾಕಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಭೇಟಿ ಸಂದರ್ಭದಲ್ಲಿ ಯಾವುದೇ ಚರ್ಚೆ ಆಗಿಲ್ಲ ಎಂದು ಬಸವರಾಜ ಹೊರಟ್ಟಿ ಅವರು ಸ್ಪಷ್ಟಪಡಿಸಿದರು.
ಬಿಜೆಪಿ ರಾಜಕೀಯ ನಿಲುವಿನ ಬಗ್ಗೆ ಆಕ್ಷೇಪ ಇಲ್ಲ. ನನಗೆ ಎಲ್ಲ ಪಕ್ಷದವರು ಸಹಕಾರ ಕೊಟ್ಟಿದ್ದಾರೆ. 1980ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜಕೀಯ ಪ್ರವೇಶ ಮಾಡಿದೆ. 1986 ಜನತಾದಳ, ಲೋಕ ಶಕ್ತಿಯಲ್ಲಿ ಇದ್ದೆ. 2000ದಿಂದ ಇಲ್ಲಿಯವರೆಗೆ ಜೆಡಿಎಸ್ನಲ್ಲಿ ಇದ್ದೆ. ಜೆಡಿಎಸ್ ನಲ್ಲಿ ದೇವೇಗೌಡರು ನನ್ನನ್ನು ಕುಟುಂಬ ಸದಸ್ಯರ ತರ ನೋಡಿಕೊಂಡರು ಎಂದರು.
Karnataka legislative council chairman Basavaraja Horatti resigned from his post. The longest-served JD(S) member since 1980 also resigned from his MLC post. He is likely to contest the upcoming MLC polls from West Teachers' Constituency.@XpressBengaluru @AshwiniMS_TNIE pic.twitter.com/WDbFMSYwHc
— Devaraj Hirehalli Bhyraiah (@swaraj76) May 16, 2022