ಜೆಡಿಎಸ್ ಗೆ ರಾಜೀನಾಮೆ ನೀಡುವುದು ಖಚಿತ: ಗುಬ್ಬಿ ಶಾಸಕ ಎಸ್ ಆರ್ ಶ್ರೀನಿವಾಸ್

ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ತಾವು ಜೆಡಿಎಸ್ ಗೆ ರಾಜೀನಾಮೆ ನೀಡುವುದಾಗಿ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.
ಎಸ್ ಆರ್ ಶ್ರೀನಿವಾಸ್
ಎಸ್ ಆರ್ ಶ್ರೀನಿವಾಸ್

ಗುಬ್ಬಿ(ತುಮಕೂರು): ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ತಾವು ಜೆಡಿಎಸ್ ಗೆ ರಾಜೀನಾಮೆ ನೀಡುವುದಾಗಿ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ.

ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಾವು ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಳಿಕ ಬೆಂಬಲಿಗರನ್ನು ಭೇಟಿ ಮಾಡಿ ಅವರ ಅಭಿಪ್ರಾಯ ಕೇಳಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ. ಈ ಮೂಲಕ ಜೆಡಿಎಸ್ ನಿಂದ ಶಾಸಕ ಶ್ರೀನಿವಾಸ್ ಹೊರಬರುವುದು ಖಚಿತವಾಗಿದೆ.

ಕಳೆದ ತಿಂಗಳು ಕರ್ನಾಟಕದಲ್ಲಿ ನಡೆದಿದ್ದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯವರ ಜೊತೆ ಶಾಸಕ ಶ್ರೀನಿವಾಸ್ ಕಾಣಿಸಿಕೊಂಡಿದ್ದರು. ಅವರು ಕಾಂಗ್ರೆಸ್ ಗೆ ಸೇರುವ ಸಾಧ್ಯತೆ ಹೆಚ್ಚಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com