ಸಿದ್ದರಾಮಯ್ಯ, ಪಿಎಫ್ ಐ ಉಗ್ರರ ನಡುವೆ ಭಾಯ್ ಭಾಯ್ ಸಂಬಂಧವಿತ್ತು- ಬಿಜೆಪಿ ಆರೋಪ

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಪಿಎಫ್ ಐ ಉಗ್ರರ ನಡುವೆ ಭಾಯ್ ಭಾಯ್ ಸಂಬಂಧವಿತ್ತೆಂದು ರಾಜ್ಯ ಬಿಜೆಪಿ ಆರೋಪಿಸಿದೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಪಿಎಫ್ ಐ ಉಗ್ರರ ನಡುವೆ ಭಾಯ್ ಭಾಯ್ ಸಂಬಂಧವಿತ್ತೆಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಕ್ಯೂಆರ್ ಕೋಡ್ ಮೂಲಕ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಪಿಎಫ್ ಐ ಮೇಲಿನ 175 ಕ್ರಿಮಿನಲ್ ಪ್ರಕರಣಗಳನ್ನು ಕೈ ಬಿಟ್ಟು ಪ್ರವೀಣ್ ಪೂಜಾರಿ, ರಾಜು, ರುದ್ರೇಶ್ ಹತ್ಯೆಗೆ ಕಾಂಗ್ರೆಸ್ ಕಾರಣವಾಗಿತ್ತು ಎಂದು ಆಪಾದಿಸಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪಿಎಫ್ ಐ ನಿಷೇಧ ಮಾಡಿದಾಗಿನಿಂದಲೂ ಹಿಂದೂ ವಿರೋಧಿ ಸಿದ್ದರಾಮಯ್ಯ ಒಳಗೊಳಗೆ ರೋಷದಿಂದ ಕುದಿಯುತ್ತಿದ್ದಾರೆ. ಸಿದ್ದರಾಮಯ್ಯರೇ, ಜಿಹಾದಿಗಳ ಮೇಲೆ ನಿಮಗೇಕೆ ಅಷ್ಟೊಂದು ಮಮಕಾರ?  ಎಂದು ಪ್ರಶ್ನಿಸಿದೆ.

ಪಿಎಫ್ ಐ ಸ್ನೇಹಿತರು ಜೈಲಿಗೆ ಹೋದಾಗಿನಿಂದ ಸಿದ್ದರಾಮಯ್ಯ ಒಬ್ಬಂಟಿಯಾಗಿದ್ದಾರೆಯೇ? ತುಕಡೆ ತುಕಡೆ ಗ್ಯಾಂಗಿನ ನಾಯಕ ರಾಹುಲ್ ಗಾಂಧಿ ಹಾಗೂ ಜಿಹಾದಿ ಬೆಂಬಲಿಗ ಸಿದ್ದರಾಮಯ್ಯ ಅವರ ಪ್ರೀತಿ ಹಾಲು ಜೀನಿನಂತೆ. ಸೋನಿಯಾ ಆಗಮನದಿಂದ ಡಿಕೆಶಿ ಹಾಗೂ ಸಿದ್ದರಾಮಯ್ಯ ಅವರಿಗೆ ಶಕ್ತಿ ಬಂದಿದ್ದು ಸುಳ್ಳಲ್ಲ. ಭ್ರಷ್ಟರೆಲ್ಲ ಒಂದೆಡೆ ಸೇರುವಾಗ ಹುರುಪು, ಶಕ್ತಿ ಸಹಜವಾದದ್ದೇ ಎಂದು ಟೀಕಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com