ಭಾರತ್ ಜೋಡೋ ಯಾತ್ರೆ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ- ಜೈರಾಮ್ ರಮೇಶ್
ಎಐಸಿಸಿ ಅಧಿನಾಯಕಿ ಪ್ರವೇಶದೊಂದಿಗೆ ರಾಜ್ಯದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮತ್ತಷ್ಟು ಬಲ ಬಂದಿದೆ.
Published: 06th October 2022 12:06 PM | Last Updated: 06th October 2022 01:24 PM | A+A A-

ರಾಹುಲ್, ಸೋನಿಯಾ ಗಾಂಧಿ, ಜೈರಾಮ್ ರಮೇಶ್
ಮಂಡ್ಯ: ಎಐಸಿಸಿ ಅಧಿನಾಯಕಿ ಪ್ರವೇಶದೊಂದಿಗೆ ರಾಜ್ಯದಲ್ಲಿ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ರಾಜ್ಯದಲ್ಲಿ ಮತ್ತಷ್ಟು ಬಲ ಬಂದಿದೆ.
ಈ ವಿಚಾರವಾಗಿ ಎಎನ್ ಐ ಸುದ್ದಿಸಂಸ್ಥೆಯೊಂದಿರುವ ಮಾತನಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ಭಾರತ್ ಜೋಡೋ ಯಾತ್ರೆಗೆ ಅಪಾರ ಜನಬೆಂಬಲ ಸಿಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ: ಭಾರತ್ ಜೋಡೋ ಐಕ್ಯತಾ ಯಾತ್ರೆ: ಪಾಂಡವಪುರದಲ್ಲಿ 'ಕೈ'ನಾಯಕರು, ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ
ಭಾರತ್ ಜೋಡೋ ಯಾತ್ರೆಗೆ ಜನರಿಂದ ಅದ್ಬುತ ಪ್ರತಿಕ್ರಿಯೆ ದೊರೆಯುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪತನಕ್ಕೆ ಕ್ಷಣಗಣನೆ ಆರಂಭವಾಗಿದೆ ಎಂಬುದುಈ ಪ್ರತಿಕ್ರಿಯೆಯಿಂದ ತಿಳಿದುಬರುತ್ತದೆ ಎಂದು ಅವರು ಹೇಳಿದ್ದಾರೆ.
Karnataka | The response we have garnered from a BJP-ruled state in Karnataka shows that the countdown for BJP's fall in the next election has begun: Congress MP Jairam Ramesh at the 'Bharat Jodo Yatra' pic.twitter.com/meTktrMs1J
— ANI (@ANI) October 6, 2022
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ನ್ಯಾಮನಹಳ್ಳಿ ಗ್ರಾಮದಲ್ಲಿ ಆರಂಭವಾದ ಯಾತ್ರೆ ಜಕ್ಕನಹಳ್ಳಿ ಕ್ರಾಸ್ ತಲುಪಿದೆ.
ಈ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಸೋನಿಯಾ ಗಾಂಧಿ ಕೂಡಾ ಹೆಜ್ಜೆ ಹಾಕುತ್ತಿದ್ದಾರೆ.
"ಐತಿಹಾಸಿಕ ಕ್ಷಣ"
— Karnataka Congress (@INCKarnataka) October 6, 2022
ಭಾರತ ಐಕ್ಯತಾ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಶ್ರೀಮತಿ ಸೋನಿಯಾ ಗಾಂಧಿಯವರು ಹೆಜ್ಜೆ ಹಾಕಿದರು,
ಭವ್ಯ ಭಾರತದೆಡೆಗೆ ಅವರಿಗಿರುವ ಪ್ರೀತಿ, ಅಭಿಮಾನ, ಬದ್ಧತೆಗಳಿಗೆ ವಯಸ್ಸು, ಆಯಾಸ, ಅನಾರೋಗ್ಯ ಯಾವುದೂ ಅಡ್ಡಿಯಾಗುವುದಿಲ್ಲ.
ಅನಾರೋಗ್ಯದಲ್ಲೂ ಅವರ ಈ ಉತ್ಸಾಹವು ಎಲ್ಲರಿಗೂ ಪ್ರೇರಕ ಶಕ್ತಿಯಾಗಿದೆ.#BharatJodoYatra pic.twitter.com/NTIXxZA0Mg