ಪ್ರತಿ ಕ್ಷೇತ್ರದಲ್ಲೂ ನಮ್ಮದೇ ಆದ ಆಡಳಿತ ಯಂತ್ರವಿರಬೇಕು: ಬಿ.ಎಲ್ ಸಂತೋಷ್

ನಮ್ಮದೇ ಸರ್ಕಾರವಿದೆ, ಆದರೆ ಆಡಳಿತ, ನ್ಯಾಯಾಂಗ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮದೇ ಆದ ಆಡಳಿತ ಯಂತ್ರಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.
ಬಿ.ಎಲ್ ಸಂತೋಷ್
ಬಿ.ಎಲ್ ಸಂತೋಷ್
Updated on

ಹುಬ್ಬಳ್ಳಿ: ನಮ್ಮದೇ ಸರ್ಕಾರವಿದೆ, ಆದರೆ ಆಡಳಿತ, ನ್ಯಾಯಾಂಗ, ಆರ್ಥಿಕತೆ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮದೇ ಆದ ಆಡಳಿತ ಯಂತ್ರಗಳಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿದ್ದಾರೆ.

ಪ್ರಜ್ಞಾ ಪ್ರವಾಹ ಕರ್ನಾಟಕ ಉತ್ತರ ಪ್ರಾಂತದ ವತಿಯಿಂದ ನಗರದ ಸವಾಯಿ ಗಂಧರ್ವ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಡಾ. ಸಂತೋಷಕುಮಾರ ಪಿ.ಕೆ ಅನುವಾದಿಸಿರುವ ‘ಸ್ವರಾಜ್‌ –75’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‌ ಪ್ರತಿಯೊಂದು ಕ್ಷೇತ್ರದಲ್ಲೂ ಪಕ್ಷದ ಸ್ವಂತ ಯಂತ್ರವನ್ನು ಸ್ಥಾಪಿಸಲು ಸೈದ್ಧಾಂತಿಕ ಆಂದೋಲನವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು. "ನಮ್ಮ ಸಿದ್ಧಾಂತವನ್ನು ಭದ್ರಪಡಿಸುವುದು ಮತ್ತು ಎಡ ಉದಾರವಾದಿಗಳಿಂದ ಪ್ರೋತ್ಸಾಹಿಸಲ್ಪಟ್ಟ ಹಲವಾರು ವಸಾಹತುಶಾಹಿ ಆಚರಣೆಗಳನ್ನು ಪ್ರಶ್ನಿಸುವುದು ಅವಶ್ಯಕವಾಗಿದೆ ಎಂದರು.

ನಾವು ಜಿಡಿಪಿ ಬೆಳವಣಿಗೆಗೆ ಮಾತ್ರವಲ್ಲ, ಉದ್ಯೋಗ ಸೃಷ್ಟಿಗೂ ಒತ್ತು ನೀಡುತ್ತೇವೆ. ನಾವು ನಿರುದ್ಯೋಗ ಬೆಳವಣಿಗೆಯ ಪರವಾಗಿಲ್ಲ ಎಂದು ಸಂತೋಷ್ ಹೇಳಿದ್ದಾರೆ. ವಿಷಯಗಳು ನಿಧಾನವಾಗಿ ಬದಲಾಗುತ್ತಿವೆ, ಆದರೆ ಅವುಗಳನ್ನು ತ್ವರಿತಗೊಳಿಸಲಾಗುತ್ತಿದೆ ಎಂದರು.

ಪ್ರಬಲವಾದ ನಾಯಕತ್ವ, ಪಕ್ಷದ ಸಂಘಟನಾತ್ಮಕ ಬೆಳವಣಿಗೆ ಮತ್ತು ಮಾಧ್ಯಮಗಳಿಗೆ, ಸಾಮಾಜಿಕ ಮಾಧ್ಯಮಗಳಿಗೆ ನಿರ್ದಿಷ್ಟವಾಗಿ ಜನರನ್ನು ಒಡ್ಡಿಕೊಳ್ಳುವುದು, ಜನರು ವಾತಾವರಣಕ್ಕೆ ಹೊಂದಿಕೊಳ್ಳುವಂತೆ ಮಾಡುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com