social_icon

ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯರು ಬೆಂಗಳೂರಿಗೆ ಬರಬೇಡಿ, ಬನ್ನಿ ಎಂದು ಯಾರನ್ನೂ ಕರೆದಿಲ್ಲ: ಮುನಿರತ್ನ ವಿವಾದಾತ್ಮಕ ಹೇಳಿಕೆ

ಬೆಂಗಳೂರು  ನಗರ ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು. ಇವರನ್ನು ಬೆಂಗಳೂರಿಗೆ ಬನ್ನಿ ಎಂದು ಯಾರನ್ನು ಕರೆದಿಲ್ಲ ಎಂದು ಬೆಂಗಳೂರನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರನ್ನು ಸಚಿವ ಮುನಿರತ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

Published: 09th September 2022 09:00 AM  |   Last Updated: 09th September 2022 01:46 PM   |  A+A-


Munirathna

ಮುನಿರತ್ನ

Posted By : shilpa
Source : The New Indian Express

ಬೆಂಗಳೂರು : ಬೆಂಗಳೂರು  ನಗರ ವಾಸಕ್ಕೆ ಯೋಗ್ಯವಲ್ಲ ಎನ್ನುವ ಅಯೋಗ್ಯ ಜನರು ಬೆಂಗಳೂರಿಗೆ ಬರಬಾರದು. ಇವರನ್ನು ಬೆಂಗಳೂರಿಗೆ ಬನ್ನಿ ಎಂದು ಯಾರನ್ನು ಕರೆದಿಲ್ಲ ಎಂದು ಬೆಂಗಳೂರನ್ನು ಟ್ರೋಲ್ ಮಾಡುತ್ತಿರುವ ನೆಟ್ಟಿಗರನ್ನು ಸಚಿವ ಮುನಿರತ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಅದೇ ರೀತಿ ಬೆಂಗಳೂರನ್ನು ತೆಗಳುವವರು ನೀಚ ಸಂಸ್ಕೃತಿಗೆ ಸೇರುತ್ತಾರೆ. ಬೆಂಗಳೂರಲ್ಲೇ ಇದ್ದು, ಬೆಂಗಳೂರಿನ ಅನ್ನವನ್ನೇ ತಿಂದು, ನಂತರ ಬೆಂಗಳೂರಿಗೆ ಬೈಯ್ಯುತ್ತಿದ್ದಾರೆ. ಈ ರೀತಿಯಾಗಿ ಯಾರು ಬೈಯ್ಯುತ್ತಿದ್ದಾರೋ ಅವರಿಂದಲೇ ಬೆಂಗಳೂರು ಹಾಳಾಗಿದೆ ಎಂದು ಕಿಡಿಕಾರಿದರು. ಮುನಿರತ್ನ ಹೇಳಿಕೆ ಸದ್ಯ ಚರ್ಚೆಗೆ ಗ್ರಾಸವಾಗಿದೆ.

ಇದೇ ವೇಳೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವವರ ಬೆಂಬಲಕ್ಕೆ ನಿಂತಿದ್ದಾರೆ. ಜನರು ಸರ್ಕಾರವನ್ನು ಸರಿಯಾಗಿ ಟೀಕಿಸುತ್ತಿದ್ದಾರೆ. ಬಿಜೆಪಿ ಸರ್ಕಾರದ ನಿರಾಸಕ್ತಿಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕ ಪ್ರದೇಶಗಳಲ್ಲಿ ಸಂಚಾರ ಕಡಿತಗೊಳಿಸಲಾಗಿದೆ.  ದೋಣಿಗಳ ಮೂಲಕ ಮಾತ್ರ ಅಲ್ಲಿಗೆ ತೆರಳುವಂತ ಪರಿಸ್ಥಿತಿ ಎದುರಾಗಿದೆ. ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರ ಪರಿಹಾರ ಘೋಷಿಸಿಲ್ಲ' ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಇದನ್ನೂ ಓದಿ: 'ಮನಿ ಇದ್ದಲ್ಲಿ ಮಾತ್ರ ಮುನಿ', ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ; 'ಮಳೆಯಲಿ, ಚಳಿಯಲ್ಲಿ ಬೆಚ್ಚಗೆ ಮಲಗಿರುವವರನ್ನು ಹುಡುಕಿಕೊಡಿ: ಕಾಂಗ್ರೆಸ್

ಜೆಡಿಎಸ್ ಮುಖಂಡ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕೂಡ ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಈ ಎಲ್ಲಾ ಸಮಸ್ಯೆಗೆ (ಪ್ರವಾಹಕ್ಕೆ) ಮುನಿರತ್ನ ಅವರ ಕೊಡುಗೆ ಎಷ್ಟು ಪರ್ಸೆೇಂಟೇಜ್ ಇದೆ? ಮುನಿರತ್ನ ಆಯ್ಕೆಯಾಗಲು ಇದೇ ಕಾರಣವೇ? ಇದು ಅವರ ದುರಹಂಕಾರವನ್ನು ತೋರಿಸುತ್ತದೆ. ಇಂತಹ ಹೇಳಿಕೆಗಳು ಬಿಜೆಪಿಯನ್ನೇ ಮುಳುಗಿಸುತ್ತವೆ ಎಂದು  ವಾಗ್ದಾಳಿ ನಡೆಸಿದ್ದಾರೆ.

ಉತ್ತರ ಕರ್ನಾಟಕ ಮೂಲದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಚ್‌ಕೆ ಪಾಟೀಲ್ ಮಾತನಾಡಿ, ಮುನಿರತ್ನ ಹೇಳಿಕೆ ಅವಮಾನಕಾರಿಯಾಗಿದೆ. ಬೆಂಗಳೂರಿಗೆ ಉತ್ತರ ಕರ್ನಾಟಕದ ಜನ ಬರುತ್ತಾರೆ, ಇದು ಅವರಿಗೆ ಮಾಡಿದ ಅಪಮಾನ ಎಂದು ಕಿಡಿ ಕಾರಿದ್ದಾರೆ.


Stay up to date on all the latest ರಾಜಕೀಯ news
Poll
Khalistani militant Hardeep Singh Nijjar

ಸಿಖ್ ಪ್ರತ್ಯೇಕತಾವಾದಿ ನಿಜ್ಜರ್ ಹತ್ಯೆಯಲ್ಲಿ ಭಾರತದ ಪಾತ್ರವಿದೆ ಎಂಬ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆರೋಪವನ್ನು ನೀವು ನಂಬುತ್ತೀರಾ?


Result
ಹೌದು
ಇಲ್ಲ

Comments(5)

Disclaimer : We respect your thoughts and views! But we need to be judicious while moderating your comments. All the comments will be moderated by the kannadaprabha.com editorial. Abstain from posting comments that are obscene, defamatory or inflammatory, and do not indulge in personal attacks. Try to avoid outside hyperlinks inside the comment. Help us delete comments that do not follow these guidelines.

The views expressed in comments published on kannadaprabha.com are those of the comment writers alone. They do not represent the views or opinions of kannadaprabha.com or its staff, nor do they represent the views or opinions of The New Indian Express Group, or any entity of, or affiliated with, The New Indian Express Group. kannadaprabha.com reserves the right to take any or all comments down at any time.

  • Flexi

    ಮುನಿರತ್ನರ ಹೇಳಿಕೆ ಸರಿಯಾಗಿದೆ.
    1 year ago reply
  • SHANKAR

    Muniratna heliruvudaralli nija ide. Eemaatugalu apply agodu namma nagarada bagge, namma rajyada bagge maatanaaduvavarige. Male inda nagara mulagade prapanchada ella kade ide. Bari bengalurina bagge maatra yaake maatanaaduttare.
    1 year ago reply
  • Nagaraj SK

    ಮುನಿರತ್ನ ಖಡಕ್ ಮಾತನ್ನೇ ಹೇಳಿದಾರೆ. ವಿವಾದಾತ್ಮಕವೇನಲ್ಲ. ವಲಸಿಗ ನೆಟ್ಟಿಗರೇ, ತಿಂದು ಕೊಬಿಬಿದ್ದೀರಿ. ಹೋಗಿ ನಿಮ್ಮ ತವರಿಗೆ, ಬೆಂಗಳೂರಿಗೂ ಶುಚಿಯಾಗತ್ತೆ, ಜೀವನ ವೆಚ್ಚದಲ್ಲಿ ಉಳಿತಾಯವಾಗುತ್ತದೆ
    1 year ago reply
    • Roopesh kodi Roopesh kodi

      Very correct
      1 year ago reply
  • Harish

    Idu Sariyad helike idaralli yavude vivaad illa. Onede kaal alli chapli hakocarella bengalore bagge matadtare. If u go and check der villages or state there will be nothing except crime
    1 year ago reply
flipboard facebook twitter whatsapp