ಬೆಂಗಳೂರು: ಪೇ ಸಿಎಂ ಫೋಸ್ಟರ್ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವಂತೆಯೇ, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ಭಾರೀ ವಾಕ್ಸಮರಕ್ಕೆ ಕಾರಣವಾಗಿದೆ.ಈ ವಿವಾದವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಭಿಯಾನವನ್ನೇ ಶುರು ಮಾಡಿದೆ.
ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತಮ್ಮ ವಿರುದ್ಧದ ಯಾವುದೇ ಆರೋಪಗಳು ನಿಜವಲ್ಲ ಎಂದಿದ್ದಾರೆ. ಕಾಂಗ್ರೆಸ್ ನವರು ಯಾವುದೇ ಸಾಕ್ಷ್ಯವನ್ನು ನೀಡಿಲ್ಲ. ಇದೆಲ್ಲವೂ ರಾಜಕೀಯ ಪ್ರೇರಿತವಾಗಿದೆ. ಪುರಾವೆ ನೀಡುವಂತೆ ಅವರಿಗೆ ಸವಾಲು ಹಾಕಿರುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನಡೆದಿದ್ದ ಹಲವಾರು ಹಗರಣಗಳು ವಿಚಾರಣೆಗೆ ಒಳಪಟ್ಟಿವೆ. QR ಕೋಡ್ ('PayCM') ಒಂದು ದುಷ್ಟ ವಿನ್ಯಾಸವಾಗಿದೆ ಎಂದು ಮುಖ್ಯಮಂತ್ರಿ ಆಕ್ರೋಶ ಹೊರ ಹಾಕಿದರು.
Advertisement