ಬಿಎಸ್ ವೈ ಆಪ್ತ, ಸಂಬಂಧಿ ಎನ್ ಆರ್ ಸಂತೋಷ್ ಗೆ ಜೆಡಿಎಸ್ ಟಿಕೆಟ್

ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.
ಎನ್ ಆರ್ ಸಂತೋಷ್- ಯಡಿಯೂರಪ್ಪ
ಎನ್ ಆರ್ ಸಂತೋಷ್- ಯಡಿಯೂರಪ್ಪ

ಬೆಂಗಳೂರು: ಕಡೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಿಸಿದಂತೆಯೇ ಜೆಡಿಎಸ್ ಪಕ್ಷ ಅರಸಿಕೆರೆ ಅಭ್ಯರ್ಥಿಯನ್ನೂ ಬದಲಿಸಲು ಚಿಂತನೆ ನಡೆಸಿದೆ.
 
ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಒಂದು ಕಾಲದಲ್ಲಿ ಆಪ್ತರಾಗಿದ್ದ ಎನ್ ಆರ್ ಸಂತೋಷ್ ಅರಸಿಕೆರೆಯಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈತಪ್ಪಿದ ಕಾರಣ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿಯಿಂದ ಜಿವಿಟಿ ಬಸವರಾಜ್ ಗೆ ಟಿಕೆಟ್ ನೀಡಲಾಗಿದ್ದರೆ, ಜೆಡಿಎ ನಾಯಕ ಹೆಚ್ ಡಿ ರೇವಣ್ಣ ಹಾಗೂ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಎನ್ ಆರ್ ಸಂತೋಷ್ ಅವರೊಂದಿಗೆ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೆಡಿಎಸ್ ನಲ್ಲಿನ ಮೂಲಗಳ ಪ್ರಕಾರ, ಎನ್  ಆರ್ ಸಂತೋಷ್ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಅರಸಿಕೆರೆ ಟಿಕೆಟ್ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ನಡುವೆ ಎನ್ ಆರ್ ಸಂತೋಷ್ ಬೆಂಬಲಿಗರು ಬೆಂಗಳೂರಿನಲ್ಲಿರುವ ದೇವೇಗೌಡ ನಿವಾಸಕ್ಕೆ ತೆರಳಿ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜೆಡಿಎಸ್ ಅರಸಿಕೆರೆ ವಿಧಾನಸಭಾ ಕ್ಷೇತ್ರದಿಂದ ಕುರುಬ ಸಮುದಾಯದ ಬಾಣಾವರ ಅಶೋಕ್ ಗೆ ಟಿಕೆಟ್ ಘೋಷಿಸಿತ್ತು. ಜೆಡಿಎಸ್ ನ ಹಾಲಿ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರಿದ್ದರು. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಎನ್ ಆರ್ ಸಂತೋಷ್ ಲಭ್ಯವಿರಲಿಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com