ಹಾಸನ ಟಿಕೆಟ್ ವಾರ್ ಗೆ ಕದನ ವಿರಾಮ: 'ಚಾಮರಾಜ' ದತ್ತ ಭವಾನಿ ರೇವಣ್ಣ!

ಹಾಸನ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿರುವ ಭವಾನಿ ರೇವಣ್ಣ ಅವರನ್ನು ಮೈಸೂರಿನ ಚಾಮರಾಜ ಕ್ಷೇತ್ರದಿಂದ ಕಣಕ್ಕೆ ಇಳಿಸಲು ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭವಾನಿ ರೇವಣ್ಣ
ಭವಾನಿ ರೇವಣ್ಣ
Updated on

ಹಾಸನ: ಹಾಸನ ಕ್ಷೇತ್ರದ ಟಿಕೆಟ್‌ಗಾಗಿ ಬೇಡಿಕೆ ಇಟ್ಟಿರುವ ಭವಾನಿ ರೇವಣ್ಣ ಅವರನ್ನು ಮೈಸೂರಿನ ಚಾಮರಾಜ ಕ್ಷೇತ್ರದಿಂದ ಕಣಕ್ಕೆ ಇಳಿಸಲು ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡಲೇಬೇಕೆಂದು ಭವಾನಿ ರೇವಣ್ಣ ಪಟ್ಟು ಹಿಡಿದಿರುವ ಹಿನ್ನೆಲೆಯಲ್ಲಿ ಅವರನ್ನು ಹಾಸನ ಕ್ಷೇತ್ರದ ಬದಲು ಬೇರೆ ಒಂದು ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಭವಾನಿ ಮನವೊಲಿಸಿ ಚಾಮರಾಜ ಕ್ಷೇತ್ರದಲ್ಲಿ ಕಣಕ್ಕಿಳಿಸಲು ಕಸರತ್ತು ಆರಂಭವಾಗಿದೆಯಂತೆ.

ಸ್ವರೂಪ್‌ ಅವರನ್ನು ಹಾಸನದಿಂದ ಹಾಗೂ ಭವಾನಿ ಅವರನ್ನು ಚಾಮರಾಜ ಕ್ಷೇತ್ರದಿಂದ ಕಣಕ್ಕೆ ಇಳಿಸುವ ನಿರ್ಧಾರ ಮಾಡಲಾಗಿದೆ. ಈ ಮೂಲಕ ಅಸಮಾಧಾನ ನಿವಾರಣೆಗೆ ಮುಂದಾಗಿದ್ದಾರೆ, ಚಾಮರಾಜ ಕ್ಷೇತ್ರದಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಳ ಹಿನ್ನೆಲೆ ಗೆಲ್ಲುವ ನಿರೀಕ್ಷೆ ಇದೆ. ಆದರೆ, ಭವಾನಿ ಇದನ್ನು ಒಪ್ಪಲಿದ್ದಾರೆಯೇ ಎನ್ನುವುದು ಸ್ಪಷ್ಟವಾಗಿಲ್ಲ ಎನ್ನಲಾಗಿದೆ.

ಮೈಸೂರಿನ ಚಾಮರಾಜ ಕ್ಷೇತ್ರದಲ್ಲಿ ಒಕ್ಕಲಿಗ ಮತಗಳು ಹೆಚ್ಚಿದ್ದು, ಜೆಡಿಎಸ್‍ಗೆ ವರದಾನ ಆಗಲಿದೆ ಎಂಬುದು ಜೆಡಿಎಸ್‌ ಮುಖಂಡರ ಲೆಕ್ಕಾಚಾರ. ಈ ಕುರಿತು ಭವಾನಿ ರೇವಣ್ಣ ಪ್ರತಿಕ್ರಿಯಿಸಲು ನಿರಾಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com