ಶಿಗ್ಗಾವಿ ಕ್ಷೇತ್ರ: ಬಿಜೆಪಿ ಅಭ್ಯರ್ಥಿಯಾಗಿ ಸಿಎಂ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್,  ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು. 
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on

ಶಿಗ್ಗಾವಿ: ಹಾವೇರಿ ಜಿಲ್ಲೆ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನಾಮಪತ್ರ ಸಲ್ಲಿಸಿದರು. ಶಿಗ್ಗಾವಿ ತಹಶೀಲ್ದಾರ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಸಿ ಎಂ ಬಸವರಾಜ ಬೊಮ್ಮಾಯಿ ಜೊತೆಯಲ್ಲಿ ಸಚಿವ ಸಿ ಸಿ ಪಾಟೀಲ್,  ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು. 

ನಾಮಪತ್ರ ಸಲ್ಲಿಕೆಗೂ ಮುನ್ನ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಒಳ್ಳೆಯ ದಿನವಾಗಿರುವ ಕಾರಣ ನಾನು ನಾಮಪತ್ರ ಸಲ್ಲಿಸುವೆ, ಏಪ್ರಿಲ್ 19ರಂದು ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸುವೆ ಎಂದರು.

 ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಟಿಕೆಟ್ ಹಂಚಿಕೆ ಬಳಿಕೆ ಗೊಂದಲವಿರುವುದು ಸಹಜ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುತ್ತಿದೆ. ಜಗದೀಶ್ ಶೆಟ್ಟರ್ ಮನವೊಲಿಸುವ ಕಾರ್ಯವೂ ನಡೆಯುತ್ತಿದೆ. ಜಗದೀಶ್ ಶೆಟ್ಟರ್ ಅವರನ್ನ ಉಳಿಸಿಕೊಳ್ಳುವ ಪ್ರಯತ್ನ ಆಗುತ್ತಿದೆ. ನಿನ್ನೆ ಧರ್ಮೇಂದ್ರ ಪ್ರಧಾನ್ ಜೊತೆ ಮಾತುಕತೆ ನಡೆಸಿದ್ದಾರೆ. ನಡ್ಡಾ ಅವರ ಜೊತೆ ನಾನೂ ಮಾತನಾಡಿದ್ದೇನೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com