ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮನ: ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಾಳೆ ರಾಜ್ಯಕ್ಕೆ ಆಗಮಿಸಲಿದ್ದು, ಕೋಲಾರದಲ್ಲಿ ರ್‍ಯಾಲಿಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾನನಷ್ಟ ಪ್ರಕರಣದಲ್ಲಿ ಸಂಸತ್ತಿನಿಂದ ಅರ್ನಹಗೊಂಡಿರುವ ರಾಹುಲ್ ಗಾಂಧಿ ಕೋಲಾರದಲ್ಲಿಯೇ ಮೋದಿ ಉಪನಾಮ ಕುರಿತು ಟೀಕೆ ಮಾಡಿದ್ದರು.

 ಮೊದಲು ಬೆಂಗಳೂರಿಗೆ ಆಗಮಿಸಲಿರುವ ರಾಹುಲ್ ನಂತರ ನೆರೆಯ ಕೋಲಾರಕ್ಕೆ ತೆರಳಿ ಜೈಭಾರತ್  ಸಮಾವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮೊದಲಿಗೆ ಏಪ್ರಿಲ್ 5, 9 ರಂದು ರ್‍ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಅಂತಿಮವಾಗಿ 
16ಕ್ಕೆ ನಿಗದಿಪಡಿಸಲಾಯಿತು.

ನಂತರ ಬೆಂಗಳೂರಿನ ಕಾಂಗ್ರೆಸ್ ಪ್ರಧಾನ ಕಛೇರಿ ಬಳಿ 'ಇಂದಿರಾ ಗಾಂಧಿ ಭವನ'ವನ್ನು ರಾಹುಲ್  ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಪಾಲ್ಗೊಳ್ಳುವ ನಿರೀಕ್ಷೆಯಿದೆ.

2019ರ ಲೋಕಸಭೆ ಚುನಾವಣೆಯ ರ್‍ಯಾಲಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಪರ ಮತ ಯಾಚಿಸಿ ಮಾತನಾಡಿದ ರಾಹುಲ್ ಗಾಂಧಿ, ಏಕೆ ಎಲ್ಲಾ ಕಳ್ಳರೂ ಮೋದಿ ಹೆಸರು ಹೊಂದಿದ್ದಾರೆ ಎಂದು ಆರೋಪಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com