ಬೆಂಗಳೂರು: ಕಾಂಗ್ರೆಸ್ ತನ್ನ 15 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಕಾಂಗ್ರೆಸ್ಗೆ ಸೇರ್ಪಡೆಯಾದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
ಶಿಗ್ಗಾಂವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಯಾರು ಕಣಕ್ಕಿಳಿಯುತ್ತಾರೆ ಎಂಬದು ತಿಳಿಯಲಿದೆ. ಶಿಗ್ಗಾಂವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಲು ಮಾಜಿ ಸಚಿವ ವಿನಯ್ ಕುಲಕರ್ಣಿ ತುದಿಗಾಲಲ್ಲಿ ನಿಂತಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಲಿದೆ ಎಂಬುದು ಸದ್ಯದ ಕುತೂಹಲ.
ಪುಲಕೇಶಿನಗರ ಶಾಸಕ ಆರ್.ಅಖಂಡ ಶ್ರೀನಿವಾಸ್ ಮೂರ್ತಿ ಅವರು ಕಾಂಗ್ರೆಸ್ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ ಹೆಬ್ಬಾಳದ ಮಾಜಿ ಕಾರ್ಪೊರೇಟರ್ ಆನಂದ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.
ಬಹು ಆಕಾಂಕ್ಷಿಗಳಿದ್ದ ಸಿ.ವಿ.ರಾಮನ್ ನಗರ, ರಾಯಚೂರು ನಗರ, ಶ್ರವಣಬೆಳಗೊಳ, ಅರಕಲಗೂಡು, ಲಿಂಗಸೂಗೂರು, ಹುಬ್ಬಳ್ಳಿ-ಧಾರವಾಡ ಪಶ್ಚಿಮ, ಮಂಗಳೂರು ಉತ್ತರ, ಶಿಡ್ಲಘಟ್ಟ, ಚಿಕ್ಕಮಗಳೂರು, ಕೆಆರ್ ಪುರಂ ಮತ್ತು ಹರಿಹರ ಕ್ಷೇತ್ರಗಳಿಗೂ ಇಂದೇ ಅಭ್ಯರ್ಥಿಗಳು ಘೋಷಣೆಯಾಗಲಿದ್ದಾರೆ.
Advertisement