ಕರ್ನಾಟಕ ಚುನಾವಣೆ: ಅಮಿತ್ ಶಾ ನಾಳೆ ಬೆಂಗಳೂರು ಭೇಟಿ, ದೇವನಹಳ್ಳಿಯಲ್ಲಿ ರೋಡ್ ಶೋ!

ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಸಿದ್ಧತೆ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ  ನಾಳೆಯಿಂದ ಎರಡು ದಿನ ಬೆಂಗಳೂರು ಭೇಟಿ ಕೈಗೊಂಡಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಎಲೆಕ್ಷನ್ ವೇಳಾಪಟ್ಟಿ ಪ್ರಕಟವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. 
ಅಮಿತ್ ಶಾ ಭೇಟಿಯ ಸಾಂದರ್ಭಿಕ ಚಿತ್ರ
ಅಮಿತ್ ಶಾ ಭೇಟಿಯ ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ಪಕ್ಷದ ಸಿದ್ಧತೆ ಪರಿಶೀಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ  ನಾಳೆಯಿಂದ ಎರಡು ದಿನ ಬೆಂಗಳೂರು ಭೇಟಿ ಕೈಗೊಂಡಿದ್ದು, ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ. ಎಲೆಕ್ಷನ್ ವೇಳಾಪಟ್ಟಿ ಪ್ರಕಟವಾದ ನಂತರ ಇದು ಅವರ ಮೊದಲ ಭೇಟಿಯಾಗಿದೆ. 

ಶುಕ್ರವಾರ ಮಧ್ಯಾಹ್ನ ಟಿಪ್ಪು ಸುಲ್ತಾನ್ ಜನ್ಮ ಸ್ಥಳವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಅಮಿತ್ ಶಾ ರೋಡ್ ನಡೆಸಲಿದ್ದು, ಪಕ್ಷದ ಅಭ್ಯರ್ಥಿ ಪಿಲ್ಲಾ ಮುನಿಶಾಮಪ್ಪ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ದೇವನಹಳ್ಳಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಮಾಜಿ ಕೇಂದ್ರ ಸಚಿವ ಕೆಹೆಚ್ ಮುನಿಯಪ್ಪ ಹಾಗೂ ಜೆಡಿಎಸ್ ನಿಂದ ಹಾಲಿ ಶಾಸಕ ಎಲ್. ಎನ್, ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ.  ಸಂಜೆ ಚುನಾವಣಾ ಸಿದ್ಧತೆಗೆ ಸಂಬಂಧಿಸಿದಂತೆ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಶನಿವಾರ ಖಾಸಗಿ ವಾಹಿನಿಯೊಂದು ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ತದನಂತರ ದೆಹಲಿಗೆ ವಾಪಸ್ಸಾಗಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com