ಕರ್ನಾಟಕ ವಿಧಾನಸಭೆ ಚುನಾವಣೆ 2023: ಮಂಡ್ಯದಲ್ಲಿ ಬಿಜೆಪಿ ಅರಳುವುದೇ ಅಥವಾ ಸಣ್ಣ ಪಕ್ಷಗಳು ದೊಡ್ಡ ಛಾಪು ಮೂಡಿಸುವುದೇ?

ದಕ್ಷಿಣ ಕರ್ನಾಟಕದ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆಯಾಗಿರುವ ನಟಿ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆಯೇ? ಬಿಜೆಪಿ ಬಯಸಿದಲ್ಲಿ ಸ್ಪರ್ಧಿಸುವ ಸುಳಿವನ್ನು ಅವರು ನೀಡಿದ್ದಾರೆ.
ಸುಮಲತಾ ಅಂಬರೀಶ್
ಸುಮಲತಾ ಅಂಬರೀಶ್
Updated on

ಮಂಡ್ಯ: ದಕ್ಷಿಣ ಕರ್ನಾಟಕದ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಂಸದೆಯಾಗಿರುವ ನಟಿ ಸುಮಲತಾ ಅಂಬರೀಶ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆಯೇ? ಬಿಜೆಪಿ ಬಯಸಿದಲ್ಲಿ ಸ್ಪರ್ಧಿಸುವ ಸುಳಿವನ್ನು ಅವರು ನೀಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಅವರ ಪತಿ ದಿವಂಗತ ಅಂಬರೀಶ್ 2013ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದಿದ್ದರು.

ಕ್ಷೇತ್ರದ ಚುನಾವಣಾ ಇತಿಹಾಸವನ್ನು ಅವಲೋಕಿಸಿದರೆ, ಅದು ಜೆಡಿಎಸ್ ಅಥವಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಒಲವು ತೋರಿದೆ. ಬಿಜೆಪಿ ಇನ್ನೂ ಛಾಪು ಮೂಡಿಸಿಲ್ಲ.2018ರಲ್ಲಿ ಜೆಡಿಎಸ್‌ನ ಎಂ ಶ್ರೀನಿವಾಸ್‌, ಕಾಂಗ್ರೆಸ್‌ನ ಪಿ ರವಿಕುಮಾರ್‌ ಅವರನ್ನು 21,000 ಮತಗಳಿಂದ ಸೋಲಿಸಿ ಕ್ಷೇತ್ರವನ್ನು ಗೆದ್ದಿದ್ದರು. ಬಿಜೆಪಿ ಅಭ್ಯರ್ಥಿ ಮೂರನೇ ಸ್ಥಾನ ಪಡೆದಿದ್ದರು.

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿರುವಂತೆೇ ಸಕ್ಕರೆ ನಾಡು ಮಂಡ್ಯದಲ್ಲಿ ಚುನಾವಣಾ ಕಾವು ಏರತೊಡಗಿದೆ. ಸರ್ವೋದಯ ಕರ್ನಾಟಕ ಪಕ್ಷ ಸಣ್ಣ ಪಕ್ಷವಾದರೂ ಅದರ ಕಚೇರಿ ಜನರಿಂದ ತುಂಬಿತ್ತು. ದಿವಂಗತ ರೈತ ಮುಖಂಡ ಕೆ.ಎಸ್.ಪುಟ್ಟಣ್ಣಯ್ಯ ಅವರ ಪುತ್ರ ದರ್ಶನ್ ಮಂಡ್ಯ ಜಿಲ್ಲೆಯ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ದರ್ಶನ್ ಬೆಂಬಲಿಸಲು ಕಾಂಗ್ರೆಸ್ ಇಲ್ಲಿ ಅಭ್ಯರ್ಥಿಯನ್ನು ಹಾಕಿಲ್ಲ. ಸರ್ವೋದಯ ಕಾಂಗ್ರೆಸ್ ಪಕ್ಷ ರಾಜ್ಯ ರೈತ ಸಂಘದ ರಾಜಕೀಯ ಶಾಖೆಯಾಗಿದ್ದು, 20 ಲಕ್ಷಕ್ಕೂ ಹೆಚ್ಚು ನೋಂದಾಯಿತ ಸದಸ್ಯರನ್ನು ಹೊಂದಿದೆ.  

ಮೇಲುಕೋಟೆ, ಮಂಡ್ಯ, ವಿರಾಜಪೇಟೆ, ಚಿತ್ರದುರ್ಗ, ಬೆಳ್ತಂಗಡಿ, ಚಾಮರಾಜನಗರ ಸೇರಿದಂತೆ ಒಕ್ಕಲಿಗ ಸಮುದಾಯದ ರೈತರೇ ಹೆಚ್ಚು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ತನ್ನ ಅಭ್ಯರ್ಥಿಗಳಲ್ಲಿ ಶೇಕಡಾ 70 ಕ್ಕಿಂತ ಹೆಚ್ಚು ಯುವಕರು ಮತ್ತು ಸುಶಿಕ್ಷಿತರು ಎಂದು ಪಕ್ಷವೇ ಹೇಳಿಕೊಂಡಿದೆ. ಬಿಜೆಪಿಗೆ ಮತ ಹಾಕದಂತೆ ಎಲ್ಲ ಸದಸ್ಯರಿಗೂ ಮನವಿ ಮಾಡಿದ್ದೇವೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಎನ್.ಗೌಡ ಹೇಳಿದರು.

ಈ ಮಧ್ಯೆ ಅಮೆರಿಕದಲ್ಲಿ ಶಿಕ್ಷಣ ಪಡೆದಿರುವ ದರ್ಶನ್ ಪುಟ್ಟಣ್ಣಯ್ಯ, ತಮ್ಮ ಪಕ್ಷದ ಸಹೋದ್ಯೋಗಿಗಳೊಂದಿಗೆ ಪ್ರಚಾರ ಕಾರ್ಯತಂತ್ರದ ಬಗ್ಗೆ ಚರ್ಚಿಸುತ್ತಿದ್ದಾರೆ. ದೊಡ್ಡ ಆಡಳಿತ ವಿರೋಧಿ ಅಲೆಯಿದ್ದು, ಸ್ಥಿರ ಸರ್ಕಾರವನ್ನು ಜನರು ಬಯಸುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪುಟ್ಟಣ್ಣಯ್ಯ ಪಿಟಿಐಗೆ ತಿಳಿಸಿದರು.

ಮಂಡ್ಯದ ಎಸ್‌ಕೆಪಿ ಅಭ್ಯರ್ಥಿ ಮಧುಚಂದನ್‌ ಎಸ್‌ಸಿ, ವೃತ್ತಿಯಲ್ಲಿ ಇಂಜಿನಿಯರ್‌ ಆಗಿದ್ದು, ವಿದೇಶದಲ್ಲಿ ಕೆಲಸ ಮಾಡಿದ್ದು, ಜೆಡಿಎಸ್ ಭದ್ರಕೋಟೆಯನ್ನು ಭೇದಿಸುವ ವಿಶ್ವಾಸದಲ್ಲಿದ್ದಾರೆ. ಜೆಡಿಎಸ್ ಒಕ್ಕಲಿಗರ ಶೇ. 40 ರಷ್ಟು ಮತಗಳನ್ನು ಪಡೆದರೆ, ಬಿಜೆಪಿ ಶೇ.35 ರಷ್ಟು ಮತಗಳನ್ನು ಪಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿಪಿ ಉಮೇಶ್ ಹೇಳಿದ್ದಾರೆ.

ಒಕ್ಕಲಿಗ ಬೆಲ್ಟ್ ಎಂದು ಪರಿಗಣಿಸಲಾದ ಹಳೇ ಮೈಸೂರಿನ 54 ಸ್ಥಾನಗಳಲ್ಲಿ, ಕಳೆದ ಚುನಾವಣೆಯಲ್ಲಿ ಜೆಡಿಎಸ್  ಮತ್ತು ಕಾಂಗ್ರೆಸ್ ಸಿಂಹಪಾಲು ಸ್ಥಾನ ಪಡೆದಿವೆ. ಪ್ರಸ್ತುತ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಪ್ರತಿನಿಧಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com