ತಮಿಳು ನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕರ್ನಾಟಕ ಚುನಾವಣೆಯಲ್ಲಿ ತಮ್ಮ ಪ್ರಭಾವ ಬಳಸಬಹುದು: ಚುನಾವಣಾ ಆಯೋಗಕ್ಕೆ ಕೆಪಿಸಿಸಿ ದೂರು

ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 
ಕೆ ಅಣ್ಣಾಮಲೈ
ಕೆ ಅಣ್ಣಾಮಲೈ

ಬೆಂಗಳೂರು: ತಮಿಳು ನಾಡು ಬಿಜೆಪಿ ಅಧ್ಯಕ್ಷ ಮತ್ತು ಕರ್ನಾಟಕ ಚುನಾವಣೆಯ ಸಹ ಉಸ್ತುವಾರಿ ಕೆ ಅಣ್ಣಾಮಲೈ ವಿರುದ್ಧ ರಾಜ್ಯ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

ರಾಜ್ಯದಲ್ಲಿ ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳ ಮೇಲೆ ಅಣ್ಣಾಮಲೈ ಪ್ರಭಾವ ಬೀರಲು ನೋಡಬಹುದು ಎಂದು ಕೆಪಿಸಿಸಿ ತನ್ನ ದೂರಿನಲ್ಲಿ ಪ್ರಸ್ತಾಪಿಸಿದೆ. 

ದೂರು ನೀಡಿದ ಬಳಿಕ ಮಾತನಾಡಿದ ಕೆಪಿಸಿಸಿ (KPCC) ವಕ್ತಾರ ನಟರಾಜ್‌ ಗೌಡ, ಅಣ್ಣಾಮಲೈ ಅವರು ತಮ್ಮ ವರ್ಚಸ್ಸು ಬಳಸಿಕೊಂಡು ಹಣ ಸಾಗಾಣಿಕೆ ಮಾಡಬಹುದು ಚುನಾವಣಾ ಅಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ನಮ್ಮ ಕಾಂಗ್ರೆಸ್‌ ನಾಯಕರು ನಮಗೆ ದೂರು ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗಕ್ಕೆ ನಾವು ದೂರು ನೀಡಿದ್ದೇವೆ ಎಂದು ತಿಳಿಸಿದರು.

ಮಾಜಿ ಐಪಿಎಸ್‌ ಆಗಿರುವ ಅಣ್ಣಾಮಲೈ ಈ ಹಿಂದೆ ಬೆಂಗಳೂರಿನಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಹಲವು ಪೊಲೀಸರ ಪರಿಚಯವಿದೆ. ಚುನಾವಣೆ ಸಮಯದಲ್ಲಿ ಬಹಳ ಮುಖ್ಯವಾದ ಹುದ್ದೆಯಲ್ಲಿ ಅಣ್ಣಾಮಲೈ ಅವರ ಪರಿಚಯಸ್ಥ ಬ್ಯಾಚ್‌ಮೇಟ್‌ಗಳು ಕರ್ತವ್ಯ ಮಾಡುತ್ತಿದ್ದಾರೆ. 

ಐಪಿಎಸ್‌ ಅಧಿಕಾರಿಗಳು, ಪೊಲೀಸರ ಪರಿಚಯ ಇರುವ ಕಾರಣ ಅಧಿಕಾರ ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಣ್ಣಾಮಲೈ ಅವರು ರಾಜ್ಯವಾಪಿ ಓಡಾಟ ನಡೆಸುವುದರಿಂದ ಅವರ ವಾಹನದಲ್ಲಿ ಹಣ ಸಾಗಾಟ ಮಾಡುವ ಸಾಧ್ಯತೆಯಿದೆ. ಇಲ್ಲಿಯವರೆಗೆ ಅವರ ವಾಹನವನ್ನು ಪರಿಶೀಲಿಸಿಲ್ಲ. ಈ ಕಾರಣಕ್ಕೆ ಚುನಾವಣೆ ಮುಗಿಯವವರೆಗೂ ಅವರ ಕರ್ನಾಟಕ ಪ್ರವಾಸಕ್ಕೆ ಅನುಮತಿ ನೀಡಿದ್ದನ್ನು ರದ್ದು ಪಡಿಸಬೇಕೆಂದು ದೂರಿನಲ್ಲಿ ಮನವಿ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com