ಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು! ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ? ಕಾಂಗ್ರೆಸ್ ಕಿಡಿ

ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲಿನ ಕಲ್ಲೆಸೆತದಿಂದ ಅವರ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಡಾ. ಜಿ. ಪರಮೇಶ್ವರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು
ಡಾ. ಜಿ. ಪರಮೇಶ್ವರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು
Updated on

ಬೆಂಗಳೂರು: ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲಿನ ಕಲ್ಲೆಸೆತದಿಂದ ಅವರ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸದ್ಯ ಪ್ರಚಾರವನ್ನು ಸ್ಥಗಿತಗೊಳಿಸಿರುವ ಡಾ. ಜಿ. ಪರಮೇಶ್ವರ್ ತುಮಕೂರಿನ ಸಿದ್ಧಾರ್ಥ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

ಡಾ. ಜಿ. ಪರಮೇಶ್ವರ್ ಅವರ ಮೇಲೆ ಷಡ್ಯಂತ್ರ ರೂಪಿಸಿ ಕಲ್ಲು ತೂರಿದ ಘಟನೆಯು ಕರ್ನಾಟಕವೇ ತಲೆತಗ್ಗಿಸುವಂತಹದ್ದಾಗಿದೆ. ವಿರೋಧ ಪಕ್ಷಗಳ ನಾಯಕರ ಮೊದಲಿಂದಲೂ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಟ್ವೀಟರ್ ನಲ್ಲಿ ಆರೋಪಿಸಿದೆ. 

ಇದು ಅಮಿತ್ ಶಾ ಅವರ "ಗಲಭೆ ನಡೆಯುತ್ತದೆ" ಎಂಬ ಎಚ್ಚರಿಕೆಯ ಹಿಂದಿನ ಪೂರ್ವಭಾವಿ ತಯಾರಿಗಳೇ? ಎಂದು ಅನುಮಾನ ವ್ಯಕ್ತಪಡಿಸಿದ್ದು,  ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ? ಎಂದು ಪ್ರಶ್ನಿಸಿದೆ.

ಕೊರಟಗೆರೆ ವಿಧಾನಸಭಾ ಕ್ಷೇತ್ರದ ಭೈರೇನಹಳ್ಳಿಯಲ್ಲಿ ಡಾ. ಜಿ.ಪರಮೇಶ್ವರ್ ಶುಕ್ರವಾರ ಪ್ರಚಾರ ನಡೆಸುತ್ತಿದ್ದಾಗ, ಕಾರ್ಯಕರ್ತರ ಗುಂಪಿನಲ್ಲಿದ್ದ ದುಷ್ಕರ್ಮಿಯಿಂದ ಕಲ್ಲು ತೂರಾಟ ನಡೆದಿದ್ದು, ಅವರ ತಲೆಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com