'ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಕನಸು ಕಂಡಿದ್ದ ಎಚ್‌ಡಿಕೆಗೆ ನಮ್ಮ ಸರ್ಕಾರ ಬಂದಾಗಿನಿಂದ ನೆಮ್ಮದಿ ಇಲ್ಲದಂತಾಗಿದೆ'

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ. 
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ
Updated on

ಬೆಂಗಳೂರು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೂ ಎಚ್‌ಡಿ ಕುಮಾರಸ್ವಾಮಿಯವರ ನಿದ್ರೆ-ನೆಮ್ಮದಿ ಹಾರಿ ಹೋಗಿದೆ‌. ಹತಾಶೆಯ ಕೂಪದಲ್ಲಿ ಬಿದ್ದು ವಿಲ ವಿಲ ಒದ್ದಾಡುತ್ತಿರುವ ಎಚ್‌ಡಿಕೆ ನಮ್ಮ ಸರ್ಕಾರದ ವಿರುದ್ಧ ಸುಳ್ಳು ಆರೋಪ ಮಾಡುವುದನ್ನೇ ಪೂರ್ಣಕಾಲಿಕ ಉದ್ಯೋಗ ಮಾಡಿಕೊಂಡಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಭಾನುವಾರ ಕಿಡಿಕಾರಿದ್ದಾರೆ. 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸರ್ಕಾರದ ವಿರುದ್ಧ ಆರೋಪ ಮಾಡಿದರೆ ಸಾಲದು, ಅದನ್ನು ಸಾಬೀತುಪಡಿಸಲಿ. ಸುಮ್ಮನೆ ಗಾಳಿಯಲ್ಲಿ ಗುಂಡು ಹಾರಿಸುವುದ್ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಎಚ್‌ಡಿ ಕುಮಾರಸ್ವಾಮಿ ಅವರು ನಮ್ಮ ಸರ್ಕಾರದ ವಿರುದ್ಧ ಆರೋಪ ಮಾಡಲು ಒಮ್ಮೆ ಪೆನ್‌ಡ್ರೈವ್ ತೋರಿಸುತ್ತಾರೆ, ಮತ್ತೊಮ್ಮೆ ಸಿಡಿ ತೋರಿಸುತ್ತಾರೆ. ನಿಜವಾಗಿಯೂ ಅವರ ಬಳಿ ದಾಖಲೆಗಳಿದ್ದರೆ, ಬಿಡುಗಡೆ ಮಾಡಲಿ. ಕುಮಾರಸ್ವಾಮಿಯವರ ಕೈಯನ್ನು ನಾವ್ಯಾರು ಕಟ್ಟಿ ಹಾಕಿಲ್ಲ. ಅವರು ಪದೇ ಪದೆ ತೋಳ ಬಂತು ತೋಳದ ಕಥೆಯ ಕಥಾನಾಯಕನ ರೀತಿ ವರ್ತಿಸಿದರೆ ಹೆದರುವರು ಯಾರು? ಎಂದಿದ್ದಾರೆ.

ಮುಂದುವರಿದು, ಎಚ್‌ಡಿ ಕುಮಾರಸ್ವಾಮಿಯವರು ಚುನಾವಣೆಗೂ ಮುನ್ನ 'ಕಿಂಗ್ ಮೇಕರ್' ಆಗುವ ಕನಸು ಕಂಡಿದ್ದರು. ಆದರೆ, ಜನರು ಚುನಾವಣೆಯಲ್ಲಿ ಅವರ 'ಕಿಂಗ್ ಮೇಕರ್' ಕನಸನ್ನು ನುಚ್ಚುನೂರು ಮಾಡಿದರು. ಕನಸು ಭಗ್ನಗೊಂಡ ಅವರು, ಭಗ್ನಪ್ರೇಮಿಯಂತೆ ವ್ಯಗ್ರರಾಗಿದ್ದಾರೆ. ಹಾಗಾಗಿ ಬಾಯಿಗೆ ಬಂದಂತೆ ನಮ್ಮ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಸುಳ್ಳು ಆರೋಪ ಮಾಡುತ್ತಾ ತಿರುಗಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com