ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲೋಕಸಭಾ ಚುನಾವಣೆ: ಮೈಸೂರು ಜಿಲ್ಲಾ ಕಾಂಗ್ರೆಸ್ ಸಿದ್ಧತೆ ಆರಂಭ 

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾವಾರು ಸಭೆ ನಡೆಸುತ್ತಿರುವ ಹೊತ್ತಿನಲ್ಲಿಯೇ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲು ಮೈಸೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಆಯೋಜಿಸಿದೆ.
Published on

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜಿಲ್ಲಾವಾರು ಸಭೆ ನಡೆಸುತ್ತಿರುವ ಹೊತ್ತಿನಲ್ಲಿಯೇ ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲು ಮೈಸೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆ ಆಯೋಜಿಸಿದೆ.

ಕನಿಷ್ಠ 20 ಸ್ಥಾನ ಗೆಲ್ಲುವ ಗುರಿಯನ್ನು ಹೈಕಮಾಂಡ್ ಹೊಂದಿದ್ದು, ಎನ್‌ಎಸ್‌ಯುಐ ಸೇರಿದಂತೆ ಎಲ್ಲಾ ಮುಂಚೂಣಿ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆಯಲು ಡಿಸಿಸಿಗೆ ಸೂಚಿಸಲಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಮನೆ ಬಾಗಿಲಿಗೆ ಕೊಂಡೊಯ್ಯುವ ಮತ್ತು ಕಾಂಗ್ರೆಸ್ ವಿರುದ್ಧದ ಬಿಜೆಪಿ ತಂತ್ರಗಳನ್ನು ನಿರೂಪಿಸುವ  ಕೆಲಸವನ್ನು ಮಾಡಲು ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರನ್ನು ನಿಯೋಜಿಸಲಾಗಿದೆ.

ಡಿಸಿಸಿ ಮುಖ್ಯಸ್ಥರು ಕೆಪಿಸಿಸಿ ವೀಕ್ಷಕರೊಂದಿಗೆ ಶುಕ್ರವಾರ ಹಿಂದುಳಿದ ವರ್ಗಗಳ ಘಟಕ, ಅಲ್ಪಸಂಖ್ಯಾತರ ಘಟಕ, ಮಹಿಳಾ ಕಾಂಗ್ರೆಸ್ ಮತ್ತು ಎನ್‌ಎಸ್‌ಯುಐ ಜೊತೆ ಸಭೆ ನಡೆಸಲಿದ್ದಾರೆ.

ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಲು ಹೊಸ ತಂಡಗಳೊಂದಿಗೆ ಮರುಸಂಘಟನೆಗೆ ದಾರಿ ಮಾಡಿಕೊಡುವ ಉದ್ದೇಶದಿಂದ ಸಕ್ರಿಯವಾಗಿಲ್ಲದ ಸಂಸ್ಥೆಗಳನ್ನು ವಿಸರ್ಜಿಸಲು ಸಭೆ ಕರೆಯಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com