ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ

ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 
ಬಸನಗೌಡ ಪಾಟೀಲ್ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Updated on

ವಿಜಯಪುರ: ಮೂರು ತಿಂಗಳ ಹಿಂದೆ ರಾಜ್ಯದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇನ್ನು ಆರು ತಿಂಗಳಲ್ಲಿ ಪತನವಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. 

ನಿನ್ನೆ ರಾತ್ರಿ ವಿಜಯಪುರದಲ್ಲಿ ಚುನಾವಣೆಯಲ್ಲಿ ಶ್ರಮಿಸಿದ ಕಾರ್ಯಕರ್ತರಿಗೆ ಔತಣ ಕೂಟ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಹೇಗೆ ಯಾವ ಕಾರಣಕ್ಕಾಗಿ ಪತನವಾಗಲಿದೆ ಎಂಬುದನ್ನು ಹೇಳಿದ್ದಾರೆ. 

ಸರ್ಕಾರ ಬಳಿ ಹಣ ಇಲ್ಲ: ಇನ್ನು 6 ತಿಂಗಳಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬೀಳುತ್ತೆ. ಅಲ್ಲಿಯವರೆಗೆ ಸಮಾಧಾನದಿಂದ ಇರಬೇಕು. ಅವರ ಕಾಂಗ್ರೆಸ್ ಶಾಸಕರಿಗೇ ಅನುದಾನ ಇಲ್ಲ ಕೊಡೋಕೆ.

ರೊಕ್ಕ ಇಲ್ಲ, ಅನುದಾನ ಕೇಳಬೇಡಿ ಎನ್ನುತ್ತಾರೆ. ಅವರ ಶಾಸಕರೇ ಅಳುತ್ತಿದ್ದಾರೆ. ಇನ್ನು ವಿರೋಧ ಪಕ್ಷದ ನಮಗೆ ಎಲ್ಲಿಂದ ಅನುದಾನ ಕೊಡ್ತಾರೆ ಅದಕ್ಕೆ ನೀವು ಕೆಲ ದಿನಗಳ ಕಾಲ ರೆಸ್ಟ್ ಮಾಡಿ. 6-7 ತಿಂಗಳು ಕಷ್ಟ ಇದೆ, ನಂತರ ನಮ್ಮ ಸರಕಾರ ಬರುತ್ತೆ ಮತ್ತೆ ಅನುದಾನ ಸಿಗುತ್ತೆ ಎಂದು ಕ್ಷೇತ್ರದ ಕಾರ್ಯಕರ್ತರಿಗೆ ಮತದಾರರಿಗೆ ಭರವಸೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com