ಬಿಜೆಪಿ ನಾಯಕರು
ಬಿಜೆಪಿ ನಾಯಕರು

ಬಿಜೆಪಿ ಈಗ ಅನಾಥ ಶಿಶು; ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆ: ಕಾಂಗ್ರೆಸ್ ವ್ಯಂಗ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.
Published on

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿರುವ ಬಿಜೆಪಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನಿಲ್ಲದ ಸರ್ಕಸ್ ನಡೆಸುತ್ತಿರುವುದಕ್ಕೆ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಅಧಿಕಾರವಿಲ್ಲದ ರಾಜ್ಯ ಬಿಜೆಪಿ ಈಗ ಹೈಕಮಾಂಡ್ ನಾಯಕರಿಗೆ ಹಾಲು ಕರೆಯದ ಗೊಡ್ಡೆಮ್ಮೆಯಂತಾಗಿದೆಯೇ? ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಪ್ರಶ್ನಿಸಿದೆ.

ಬಿಜೆಪಿಯಲ್ಲಿ ಈಗ ಆಂತರಿಕ ಕಲಹ ಮುಗಿಲು ಮುಟ್ಟಿದೆ, ಪಕ್ಷವನ್ನು ಮುನ್ನಡೆಸಲಾಗದ ಅಧ್ಯಕ್ಷ ನಾಪತ್ತೆಯಾಗಿದ್ದಾರೆ, ಹೈಕಮಾಂಡ್ ಕರ್ನಾಟಕದ ಬಿಜೆಪಿಯತ್ತ ತಿರುಗಿಯೂ ನೋಡುತ್ತಿಲ್ಲ, ವಾರಕ್ಕೊಮ್ಮೆ ಬರುತ್ತಿದ್ದ ಉಸ್ತುವಾರಿ ಅರುಣ್ ಸಿಂಗ್ ನಾಪತ್ತೆ, ತಿಂಗಳಿಗೊಮ್ಮೆ ಬರುತ್ತಿದ್ದ ಜೆಪಿ ನಡ್ಡಾ ನಾಪತ್ತೆಯಾಗಿದ್ದಾರೆ, ಅಧಿಕಾರವಿದ್ದಾಗ ಇವರೆಲ್ಲಾ ATM ನಲ್ಲಿನ ಹಣ ಡ್ರಾ ಮಾಡಿಕೊಳ್ಳಲು ಬರುತ್ತಿದ್ದರಾ ಎಂದು ಪ್ರಶ್ನಿಸಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ಈಗ ಅನಾಥ ಶಿಶು ಎಂದು ಕಾಲೆಳೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com