ದಯಮಾಡಿ ಈ ಬಾರಿ ಪ್ರತಾಪ್ ಸಿಂಹನನ್ನು ಗೆಲ್ಲಿಸಬೇಡಿ: ಕೈಮುಗಿದು ಸಿಎಂ ಸಿದ್ದರಾಮಯ್ಯ ಕರೆ

ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್ ಆಗಿದೆ.
ಸಿದ್ದರಾಮಯ್ಯ ಮತ್ತು ಪ್ರತಾಪ್ ಸಿಂಹ
ಸಿದ್ದರಾಮಯ್ಯ ಮತ್ತು ಪ್ರತಾಪ್ ಸಿಂಹ
Updated on

ಮೈಸೂರು: ಈ ಬಾರಿ ಸಂಸದ ಪ್ರತಾಪ್ ಸಿಂಹನನ್ನು ದಯವಿಟ್ಟು ಗೆಲ್ಲಿಸಬೇಡಿ ಎಂದು ಕೈ ಮುಗಿದು ಮನವಿ ಮಾಡಿದ ಸಿದ್ದರಾಮಯ್ಯ ವಿಡಿಯೋ ವೈರಲ್ ಆಗಿದೆ.

ಮೈಸೂರಿನ ಎನ್‌ಆರ್‌ ಕ್ಷೇತ್ರದ ರಾಜೀವ್ ನಗರದಲ್ಲಿ ನೂತನ ಸರ್ಕಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ‌ನೀಡಿ. ಭ್ರಷ್ಟ, ಕೋಮು ಸಂಘರ್ಷಕ್ಕೆ ಅವಕಾಶ ಮಾಡುವ ಬಿಜೆಪಿಯನ್ನು ದೂರವಿಡಿ ಎಂದರು.

ಮುಂದುವರೆದು ಮಾತನಾಡಿದ ಅವರು ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಅಡುಗೆ ಅನಿಲ ದರ ಕಡಿಮೆ ಮಾಡಿದ್ದಾರೆ. ದಯಮಾಡಿ ಮೈಸೂರಿನಲ್ಲಿ ಈ ಬಾರಿ ಪ್ರತಾಪ್ ಸಿಂಹ ಅವರನ್ನು ಗೆಲ್ಲಿಸಬೇಡಿ ಎಂದು ಕರೆ ನೀಡಿದ್ದಾರೆ.

ನರೇಂದ್ರ ಮೋದಿ ಪ್ರಧಾನಿಯಾಗಿ ಒಂಬತ್ತು ವರ್ಷ ಆಯಿತು. ಇಷ್ಟು ವರ್ಷದಲ್ಲಿ ಅವರು ಬರಿ ಸುಳ್ಳನ್ನೇ ಹೇಳುತ್ತಾ ಬಂದಿದ್ದಾರೆ. ಹಿಂದು ಮುಸ್ಲಿಂ, ಹಿಜಾಬ್, ಹಲಾಲ್ ಕಟ್ ವಿಚಾರಗಳನ್ನು ಮುಂದಿಟ್ಟು ಸಮಾಜದ ಸಾಮರಸ್ಯವನ್ನೇ ಹಾಳು ಮಾಡುವ ಕೆಲಸ ಮಾಡಿದ್ದಾರೆ. ಈ ಬಾರಿ ದಯಮಾಡಿ ಮೈಸೂರಿನ ಜನ ಪ್ರತಾಪ್ ಸಿಂಹನನ್ನು ಆಯ್ಕೆ ಮಾಡಬೇಡಿ. ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿರುವ ವಿಡಿಯೋ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com