ಚುನಾವಣಾ ಫಲಿತಾಂಶಗಳು ಪ್ರಧಾನಿ ಮೋದಿ ಮೇಲಿನ ಜನರ ನಂಬಿಕೆಯನ್ನು ತೋರಿಸುತ್ತವೆ: ಬಿವೈ ವಿಜಯೇಂದ್ರ

ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಪಕ್ಷದ ಕರ್ನಾಟಕ ಘಟಕದ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾನುವಾರ ಹೇಳಿದ್ದಾರೆ.
ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ.
ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ.
Updated on

ಬೆಂಗಳೂರು: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮೂರರಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಪಕ್ಷದ ಕರ್ನಾಟಕ ಘಟಕದ ಮುಖ್ಯಸ್ಥ ಬಿವೈ ವಿಜಯೇಂದ್ರ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭಾನುವಾರ ಹೇಳಿದ್ದಾರೆ.

ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಈ ಚುನಾವಣಾ ಫಲಿತಾಂಶದ ಮೂಲಕ ಜನರು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ದೇಶದ ಪ್ರಧಾನಿಯನ್ನಾಗಿ ನೋಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದರು.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಎಲ್ಲಾ 28 ಸ್ಥಾನಗಳನ್ನು ಗೆಲ್ಲುತ್ತೇವೆ. ಐದು ರಾಜ್ಯಗಳ ಚುನಾವಣೆಯನ್ನು ಜನರು ಸೆಮಿಫೈನಲ್ ಎಂದು ಕರೆಯುತ್ತಿದ್ದರು. ದೇಶದಲ್ಲಿ ಬಿಜೆಪಿ ಸುನಾಮಿ ಎದ್ದಿರುವುದು ಈಗ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಹೇಳಿದರು.

ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರದಲ್ಲಿ ಮೂರನೇ ಬಾರಿಗೆ ಮೋದಿ ಅಧಿಕಾರಕ್ಕೆ ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಈ ಚುನಾವಣೆಯ ಮಹತ್ವದ ಭಾಗವೆಂದರೆ ಜನರು ದೇಶದ ಸುರಕ್ಷತೆಯನ್ನು ನಿರೀಕ್ಷಿಸುತ್ತಿದ್ದಾರೆಯೇ ಹೊರತು ಅಧಿಕಾರ ಹಿಡಿಯುವ ಆಮಿಷಗಳ ಗ್ಯಾರಂಟಿಯನ್ನಲ್ಲ. ಇದನ್ನು ಕಾಂಗ್ರೆಸ್ ಕೂಡ ಅರಿತುಕೊಂಡಿದೆ ಎಂದರು.

ಐದು ಖಾತರಿಗಳ ನೆಪದಲ್ಲಿ ಜನರನ್ನು ಸೆಳೆದು ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಈಗ ಜನರು ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರದತ್ತ ದಾಪುಗಾಲಿಡುತ್ತಿದ್ದರೆ, ನೆರೆಯ ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವುದು ಬಹುತೇಕ ಸ್ಪಷ್ಟವಾಗಿದೆ.

ಮಿಜೋರಾಂ ರಾಜ್ಯದ ಚುನಾವಣೆಯ ಮತ ಎಣಿಕೆ ಸೋಮವಾರ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com