ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನೇಮಕ

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. 
ಬಿ.ವೈ ವಿಜಯೇಂದ್ರ
ಬಿ.ವೈ ವಿಜಯೇಂದ್ರ
Updated on

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಪಕ್ಷದ ರಾಜ್ಯ ಘಕಟಕಕ್ಕೆ ನೂತನ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಶನಿವಾರ ಆದೇಶ ಹೊರಡಿಸಿದ್ದಾರೆ. 

ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್ ಹಾಗೂ ಎನ್ ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ್ ಕೇಲಗಾರ, ಮಾಳವಿಕಾ ಅವಿನಾಶ್ ಮತ್ತು ಎಂ.ರಾಜೇಂದ್ರ ಅವರನ್ನು ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ.

ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ ಹಾಗೂ ಜೆ.ಪ್ರೀತಮ್ ಗೌಡ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ.

ವಿವಿಧ ಮೋರ್ಚಾಗಳ ರಾಜ್ಯಾಧ್ಯಕ್ಷರು
ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಸಿ.ಮಂಜುಳಾ, ಯುವ ಮೋರ್ಚಾ ಅಧ್ಯಕ್ಷರಾಗಿ ಧೀರಜ್ ಮುನಿರಾಜು, ಎಸ್.ಟಿ.ಮೋರ್ಚಾ ಅಧ್ಯಕ್ಷರಾಗಿ ಬಂಗಾರು ಹನುಮಂತು, ಎಸ್.ಸಿ.ಮೋರ್ಚಾ ಅಧ್ಯಕ್ಷರಾಗಿ ಎಸ್.ಮಂಜುನಾಥ್(ಸಿಮೆಂಟ್ ಮಂಜು), ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾಗಿ ರಘು ಕೌಟಿಲ್ಯ ರೈತ ಮೋರ್ಚಾ ಅಧ್ಯಕ್ಷರಾಗಿ ಎ.ಎಸ್.ಪಾಟೀಲ್ ನಡಹಳ್ಳಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿ ಅನಿಲ್ ಥಾಮಸ್ ಅವರನ್ನು ನೇಮಕ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com