ಶಿವಾನಂದ ಪಾಟೀಲ ಬೇಷರತ್ ಕ್ಷಮೆ ಕೇಳಬೇಕು: ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಹೆಚ್. ಡಿ. ಕುಮಾರಸ್ವಾಮಿ, ಶಿವಾನಂದ ಪಾಟೀಲ
ಹೆಚ್. ಡಿ. ಕುಮಾರಸ್ವಾಮಿ, ಶಿವಾನಂದ ಪಾಟೀಲ
Updated on

ಬೆಂಗಳೂರು: ಬರಗಾಲ ಬಂದ್ರೆ ರೈತರು ಸಾಲಮನ್ನಾದ ನಿರೀಕ್ಷೆ ಇಟ್ಕೊಳ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಸಕ್ಕರೆ ಖಾತೆ ಸಚಿವ ಶಿವಾನಂದ ಪಾಟೀಲ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸುತ್ತಿವೆ. ಸಚಿವರು ಬೇಷರತ್ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಕುಮಾರಸ್ವಾಮಿ, ಶಿವಾನಂದ ಪಾಟೀಲ ಅವರು ರೈತರ ಬಗ್ಗೆ ನೀಡಿರುವ ಹೇಳಿಕೆ ಖಂಡನೀಯ. ಅನ್ನದಾತನ ಕಷ್ಟ, ಸಂಕಷ್ಟಗಳ ಬಗ್ಗೆ ಅವಹೇಳನ ಮಾಡುವುದು ಖಂಡಿತಾ ಸರಿಯಲ್ಲ. ಸಚಿವರು ಇಂಥ ವಿಷಯಗಳ ಬಗ್ಗೆ ಬಹಳ ಎಚ್ಚರಿಕೆ, ಸೂಕ್ಷ್ಮತೆ, ಸಂಯಮದಿಂದ ಮಾತನಾಡಬೇಕು ಎಂದಿದ್ದಾರೆ. 

ನಾನು ಕೃಷಿಸಾಲ ಮನ್ನಾ ಮಾಡುವ ಮುನ್ನ ರಾಜ್ಯದಲ್ಲಿ ನಡೆದ ರೈತರ ಸರಣಿ ಆತ್ಮಹತ್ಯಾಕಾಂಡ ನೆನಪು ಮಾಡಿಕೊಂಡರೆ ಈಗಲೂ ನನ್ನ ಮೈ ನಡುಗುತ್ತದೆ. ರೈತ ಕೇಳುತ್ತಿರುವುದು ತನ್ನ ಹಕ್ಕನ್ನಷ್ಟೇ, ಭಿಕ್ಷೆಯನ್ನಲ್ಲ. ಸಚಿವರು ಬೇಷರತ್ ಕ್ಷಮೆ ಕೇಳಬೇಕು, ತಮ್ಮ ಹೇಳಿಕೆಯನ್ನು ಕೂಡಲೇ  ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com