ಸೋಮಾಲಿಯಾದ ಕಡಲ್ಗಳ್ಳರನ್ನೂ ಮೀರಿ ಬಿಜೆಪಿಯಿಂದ ಕರ್ನಾಟಕ ಲೂಟಿ: ಅಣ್ಣ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ!

‘ಯತ್ನಾಳ್ ಆರೋಪ ನೋಡಿದರೆ ಬಿಜೆಪಿಗರು ಕರ್ನಾಟಕವನ್ನು ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿಸುವಂತೆ ಲೂಟಿ ಹೊಡೆದಿದ್ದಾರೆಯೇ? ಬಿಜೆಪಿಯ ಒಳಜಗಳದಲ್ಲಿ ಬಿಜೆಪಿಗರ ಬಾಯಿಯಿಂದಲೇ ಅವೆಲ್ಲವೂ ಬಯಲಾಗುತ್ತಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.
ವಿಜಯೇಂದ್ರ ಮತ್ತು ಪ್ರತಾಪ್ ಸಿಂಹ
ವಿಜಯೇಂದ್ರ ಮತ್ತು ಪ್ರತಾಪ್ ಸಿಂಹ
Updated on

ಬೆಂಗಳೂರು: ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿ ಬಿಜೆಪಿ ಕರ್ನಾಟಕವನ್ನು ಲೂಟಿ ಮಾಡಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಕೊರೊನಾ ಸಾಂಕ್ರಾಮಿಕದ ವೇಳೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಂದಾಜು 40 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರ ಎಸಗಿದೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪತ್ರಿಕಿಯಿಸಿದೆ.

‘ಯತ್ನಾಳ್ ಆರೋಪ ನೋಡಿದರೆ ಬಿಜೆಪಿಗರು ಕರ್ನಾಟಕವನ್ನು ಸೋಮಾಲಿಯಾದ ಕಡಲುಗಳ್ಳರನ್ನೂ ಮೀರಿಸುವಂತೆ ಲೂಟಿ ಹೊಡೆದಿದ್ದಾರೆಯೇ? ಬಿಜೆಪಿಯ ಒಳಜಗಳದಲ್ಲಿ ಬಿಜೆಪಿಗರ ಬಾಯಿಯಿಂದಲೇ ಅವೆಲ್ಲವೂ ಬಯಲಾಗುತ್ತಿದೆ’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಕೋವಿಡ್ ಕಾಲದಲ್ಲಿ ಶ್ಯಾಡೋ ಸಿಎಂ ಆಗಿದ್ದ ಬಿ.ವೈ.ವಿಜಯೇಂದ್ರ ಅವರೇ, 45 ರೂಪಾಯಿಯ ಮಾಸ್ಕು 480 ರೂಪಾಯಿಯಾಗಿದ್ದು ಹೇಗೆ? ಹೆಚ್ಚುವರಿ 435 ರೂಪಾಯಿ #VijayendraServiceTaXಗೆ ಸೇರಿದ ಹಣವೇ? 40 ಸಾವಿರ ಕೋಟಿ ರೂಪಾಯಿಯ ಯತ್ನಾಳ್ ಆರೋಪ ಸುಳ್ಳು ಎಂದಾದರೆ ಬಿಜೆಪಿ ನ್ಯಾಯಾಂಗ ತನಿಖೆಗೆ ಒತ್ತಾಯಿಸುವುದೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

40 ಸಾವಿರ ಕೋಟಿ ಹಗರಣದ ಆರೋಪವನ್ನು ಸ್ವತಃ ಬಿಜೆಪಿಯ ಹಿರಿಯ ನಾಯಕರೇ ಮಾಡಿದ್ದಾರೆ. ಈ ಬಗ್ಗೆ ಉತ್ತರಿಸುವ ಹೊಣೆಗಾರಿಕೆ ಬಿಜೆಪಿ ಅಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ್  ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರದ್ದು. 40 ಸಾವಿರ ಕೋಟಿಯಲ್ಲಿ ಯಾರ ಪಾಲೆಷ್ಟು? ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ?ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವತಃ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿದ್ದರೂ, BSY & ಸನ್ಸ್ ವಿರುದ್ಧ ಇಷ್ಟೆಲ್ಲಾ ಮಾತಾಡಿದರೂ ಯತ್ನಾಳ್ ವಿರುದ್ಧ ಬಿಜೆಪಿ ಪಕ್ಷ ಕಠಿಣ ಕ್ರಮ ಕೈಗೊಳ್ಳದಿರುವುದು ನೋಡಿದರೆ 40 ಸಾವಿರ ಕೋಟಿಯ ಹಗರಣದ ಕಬಂದ ಬಾಹುಗಳು ವಿಸ್ತಾರವಾಗಿ ಹಬ್ಬಿರುವುದು ಸ್ಪಷ್ಟ. ಮಾಜಿ ಶ್ಯಾಡೋ ಸಿಎಂ ವಿಜಯೇಂದ್ರ ಅವರೇ, ಕೋವಿಡ್ ಹಗರಣದ ಬಗ್ಗೆ ಮೌನಕ್ಕೆ ಜಾರಿರುವುದೇಕೆ? ತಮ್ಮಲ್ಲಿ ಸಾಚಾತನವಿದ್ದರೆ ಈ ಹಗರಣದ ತನಿಖೆಗೆ ಒತ್ತಾಯಿಸುತ್ತಿಲ್ಲವೇಕೆ? ಎಂದು ತಪರಾಕಿ ಹಾಕಿದೆ.

"40" ಬಿಜೆಪಿಯ ಅದೃಷ್ಟ ಸಂಖ್ಯೆ ಇರಬಹುದೇನೋ, ಕಮಿಷನ್ - 40% ಕೋವಿಡ್ ಹಗರಣ - 40 ಸಾವಿರ ಕೋಟಿ, ಸ್ವತಃ ಬಿಜೆಪಿಯ ಹಿರಿಯ ನಾಯಕರಿಂದಲೇ ಹೊರಬಿದ್ದ 40 ಸಾವಿರ ಕೋಟಿ ರೂಪಾಯಿಯ ಕೋವಿಡ್ ಹಗರಣದ ಬಗ್ಗೆ ವಿಜಯೇಂದ್ರ ಜನತೆಗೆ ಉತ್ತರಿಸದೆ ಮೌನವಾಗಿರುವುದೇಕೆ? ಈ 40 ಸಾವಿರ ಕೋಟಿಯಲ್ಲಿ ಹೈಕಮಾಂಡ್ ನಾಯಕರ ಪಾಲೆಷ್ಟು ಎಂದಿದೆ.

ಅಣ್ಣ ನಾಡಕಳ್ಳ, ತಮ್ಮ ವಿಕ್ರಮ್ ಸಿಂಹ ಕಾಡುಗಳ್ಳ! ಹತ್ತಾರು ಎಕರೆಯಲ್ಲಿದ್ದ ಸಾವಿರಾರು ಮರಗಳನ್ನು ಮಾರಣ ಹೋಮ ಮಾಡಿ, ಕಳ್ಳಸಾಗಣೆಗೆ ಮುಂದಾಗಿದ್ದ ಪ್ರತಾಪ್ ಸಿಂಹನ ಸಹೋದರನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ. ವೀರಪ್ಪನ್ ನಿಂದ ತೆರವಾದ ಸ್ಥಾನಕ್ಕೆ ತಮ್ಮ ಸಹೋದರನನ್ನು ಪ್ರತಿಷ್ಠಾಪಿಸಲು ಮುಂದಾಗಿರುವಂತಿದೆ ಪ್ರತಾಪ್ ಸಿಂಹ! ಈ ಅಣ್ಣ ತಮ್ಮಂದಿರಿಂದ ನಾಡು, ಕಾಡು ಎರಡಕ್ಕೂ ಆಪತ್ತು ಅಲ್ಲವೇ ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com