ಅಸಮಾಧಾನ ತಣಿಸಲು ರಾಯರೆಡ್ಡಿ, ಬಿಆರ್‌ ಪಾಟೀಲ್‌, ದೇಶಪಾಂಡೆಗೆ ಸಂಪುಟ ದರ್ಜೆ ಸ್ಥಾನ ಮಾನ ನೀಡಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ತಣಿಸಲು ಮೂವರು ಹಿರಿಯ ಶಾಸಕರಿಗೆ ಮಹತ್ವದ ಸ್ಥಾನ ನೀಡಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ...
ರಾಯರೆಡ್ಡಿ, ಬಿಆರ್‌ ಪಾಟೀಲ್‌, ದೇಶಪಾಂಡೆ
ರಾಯರೆಡ್ಡಿ, ಬಿಆರ್‌ ಪಾಟೀಲ್‌, ದೇಶಪಾಂಡೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ತಣಿಸಲು ಮೂವರು ಹಿರಿಯ ಶಾಸಕರಿಗೆ ಮಹತ್ವದ ಸ್ಥಾನ ನೀಡಿದ್ದು, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಸವರಾಜ ರಾಯರಡ್ಡಿ ಅವರನ್ನು ನೇಮಕ ಮಾಡಲಾಗಿದೆ.

ಅಲ್ಲದೇ ಮುಖ್ಯಮಂತ್ರಿಗಳ ಸಲಹೆಗಾರರಾಗಿ ಆಳಂದ ಶಾಸಕ ಶಾಸಕ ಬಿಆರ್‌ ಪಾಟೀಲ್‌ ಅವರನ್ನು ಮತ್ತು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರಾಗಿ ಆರ್.ವಿ.ದೇಶಪಾಂಡೆ ಅವರನ್ನು ನೇಮಕ ಮಾಡಲಾಗಿದೆ.

ಈ ಮೂವರು ಶಾಸಕರಿಗೆ ಸಚಿವ ಸಂಪುಟ ದರ್ಜೆ ಸ್ಥಾನ ಮಾನ ನೀಡಿ ರಾಜ್ಯಪಾಲರ ಆದೇಶಾನುಸಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ-2(ಪ್ರ) ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಈ ಮೂವರೂ ಶಾಸಕರು ಸಚಿವರಾಗಲು ತೀವ್ರ ಪ್ರಯತ್ನ ನಡೆಸಿದ್ದರು. ಆದರೆ ಸಚಿವ ಸ್ಥಾನ ಸಿಗದಿದ್ದಾಗ ಸಚಿವರ ಕಾರ್ಯ ವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಶಾಸಕರ ಪತ್ರಗಳಿಗೆ ಸಚಿವರು ಕಿಮ್ಮತ್ತು ನೀಡುತ್ತಿಲ್ಲ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com