ಲೋಕಸಭೆ ಚುನಾವಣೆ ಹಿನ್ನೆಲೆ ಸಿದ್ದರಾಮಯ್ಯ ಮುಸ್ಲಿಮರನ್ನು ಓಲೈಸುತ್ತಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

ಮುಂಬರುವ ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶನಿವಾರ ಹೇಳಿದ್ದಾರೆ.
ವಿಪಕ್ಷ ನಾಯಕ ಆರ್.ಅಶೋಕ್
ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಮರ ಓಲೈಕೆಯಲ್ಲಿ ತೊಡಗಿದ್ದಾರೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರು ಶನಿವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (ಟ್ವಿಟರ್)ನಲ್ಲಿ ಪೋಸ್ಟ್ ಮಾಡಿರುವ ಅವರು, ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

"ಅಲ್ಪಸಂಖ್ಯಾತರ ಓಲೈಕೆ ರೈತರ ಕುತ್ತಿಗೆಗೆ ಕುಣಿಕೆ... ಬರದಿಂದ ಹೈರಾಣಾಗಿರುವ ರೈತರಿಗೆ 2,000 ರೂಪಾಯಿ ಪರಿಹಾರ ಕೊಡಲು ಮೀನಾ-ಮೇಷ ಎಣಿಸುತ್ತಿರುವ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ತುಷ್ಟೀಕರಣಕ್ಕೆ 1,000 ಕೋಟಿ ನೀಡಲು ಹೊರಟಿದೆ. ತಮ್ಮ ಕಲ್ಲು ಹೃದಯ ಕರಗಲು ಇನ್ನೆಷ್ಟು ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕು ಸಿಎಂ ಸಿದ್ದರಾಮಯ್ಯನವರೇ?" ಎಂದು ಕೇಳಿದ್ದಾರೆ.

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಒಂದು ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com