ಹುಬ್ಬಳ್ಳಿ: ಕುಮಾರಸ್ವಾಮಿ ಮೊದಲು ಕುಟುಂಬ ನಿಭಾಯಿಸಲಿ, ಆಮೇಲೆ ರಾಜ್ಯ ಆಳಲು ಬರಲಿ- ಜೋಶಿ ವ್ಯಂಗ್ಯ

ಹಾಸನ ಜೆಡಿಎಸ್ ಟಿಕೆಟ್  ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.
ಪ್ರಹ್ಲಾದ್ ಜೋಶಿ
ಪ್ರಹ್ಲಾದ್ ಜೋಶಿ
Updated on

ಹುಬ್ಬಳ್ಳಿ: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು. 

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.

ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ  ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್‌ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು‌.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com