ಥಟ್ ಅಂತ ಹೇಳಿ! ಬಾಂಧವರಿಗೆ ಮೀಸಲಿಟ್ಟ ಭೂಮಿಯನ್ನು ನುಂಗಿ ಹಾಕಿದ ಭೂಗಳ್ಳ ಯಾರು?

ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.
ಬಿಜೆಪಿ ಟ್ವೀಟ್
ಬಿಜೆಪಿ ಟ್ವೀಟ್
Updated on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣ ಸಮೀಪಿಸುತ್ತಿದ್ದಂತೆ ಬಿಜೆಪಿ-ಕಾಂಗ್ರೆಸ್ ನಾಯಕರ ಪರಸ್ಪರ ವಾಗ್ದಾಳಿ ಮತ್ತಷ್ಟು ರಂಗೇರಿದೆ.

ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ, ವಕ್ಫ್ ಮಂಡಳಿಗೆ ಸೇರಿದ ಅಂದಾಜು 2.30 ಲಕ್ಷ ಕೋಟಿ ರೂಪಾಯಿ ಮೌಲ್ಯದ 29,000 ಎಕರೆ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿತ್ತು. ಈ ಪ್ರಕರಣದ ಭೂಗಳ್ಳ ಯಾರು? ಎಂದು ಟ್ವಿಟ್ಟರ್ ನಲ್ಲಿ  ಪ್ರಶ್ನಿಸಿದೆ.

ಪದವಿ ವಿದ್ಯಾರ್ಥಿಗಳಿಗೆ ನೀಡುವ ಉಚಿತ ಲ್ಯಾಪ್‌ಟಾಪ್‌ ವಿತರಣೆಯಲ್ಲೂ ಗೋಲ್‌ ಮಾಡಿ ಬರೋಬ್ಬರಿ 300 ಕೋಟಿ ರೂ. ಲಪಟಾಯಿಸಿದವರು ಯಾರು? ಎಂದು ಬಿಜೆಪಿ ಟ್ವೀಟ್ ಮಾಡಿದೆ.

‘ಕಾಮನ್‌ ಮ್ಯಾನ್‌ ಸಿಎಂ’ ಅವರನ್ನು ನಾಯಿಗೆ ಹೋಲಿಸುವ ಸಿದ್ದರಾಮಯ್ಯ ಅವರು ಸೋನಿಯಾ, ರಾಹುಲ್‌ ಎದುರು ಬಂದರೆ ಇಲಿಯಂತಾಗುತ್ತಾರೆ, ಬೊಮ್ಮಾಯಿ ಅವರನ್ನು ಬಾಯಿಗೆ ಬಂದಂತೆ ಆಡಿಕೊಂಡವರದ್ದು ಈಗ ನಾಯಿಪಾಡು ಎಂದು ಬಿಜೆಪಿ ಲೇವಡಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com