ಸ್ಯಾಂಟ್ರೋ ರವಿ ಬಂಧನ ರಾಜ್ಯ ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ: ಕಾಂಗ್ರೆಸ್

ಅತ್ಯಾಚಾರ ಆರೋಪಿ ಸ್ಯಾಂಟ್ರೋ ರವಿ ಬಂಧನದಿಂದ ಮುಂಬೈಗೆ ತೆರಳಿದ್ದ ನಾಯಕರು, ರಾಜಕಾರಣಿಗಳ ಮಕ್ಕಳು, ಉನ್ನತ ಅಧಿಕಾರಿಗಳ ವಿಡಿಯೋಗಳು ಹೊರಬೀಳುವ ಸಾಧ್ಯತೆ ಇದ್ದು, ಈ ಬೆಳವಣಿಗೆಯು ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಮೈಸೂರು: ಅತ್ಯಾಚಾರ ಆರೋಪಿ ಸ್ಯಾಂಟ್ರೋ ರವಿ ಬಂಧನದಿಂದ ಮುಂಬೈಗೆ ತೆರಳಿದ್ದ ನಾಯಕರು, ರಾಜಕಾರಣಿಗಳ ಮಕ್ಕಳು, ಉನ್ನತ ಅಧಿಕಾರಿಗಳ ವಿಡಿಯೋಗಳು ಹೊರಬೀಳುವ ಸಾಧ್ಯತೆ ಇದ್ದು, ಈ ಬೆಳವಣಿಗೆಯು ಸರ್ಕಾರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅವರು ಹೇಳಿದ್ದಾರೆ.

ಸ್ಯಾಂಟ್ರೋ ರವಿ ಬಂಧನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಎಂ ಬೊಮ್ಮಾಯಿಯವರು ಹೈಪ್ರೊಫೈಲ್ ಕೇಸ್ ಎಂದು ಪರಿಗಣಿಸುವಂತೆ ಮಾಡಿದ್ದು, ಸಾರ್ವಜನಿಕ ಜೀವನ ಮತ್ತು ಉನ್ನತ ಹುದ್ದೆಯಲ್ಲಿರುವವರೊಂದಿಗೆ ಸ್ಯಾಂಟ್ರೋ ರವಿ ಹೊಂದಿರುವ ಸಂಬಂಧವನ್ನು ಸರ್ಕಾರ ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ರವಿ ವರ್ಗಾವಣೆ ಹಗರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣದಲ್ಲಿ ರವಿ ಬಳಿ ಉನ್ನತ ವ್ಯಕ್ತಿಗಳ ಬಗ್ಗೆ ಮಾಹಿತಿ ಇರುವುದರಿಂದ ಸರ್ಕಾರ ಆತಂಕಕ್ಕೆ ಶುರುವಾಗಿದೆ, ಪೊಲೀಸರು ರವಿ ಮಾಜಿ ಪತ್ನಿಯಿಂದ ಅತ್ಯಾಚಾರ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆದರೆ, ಸಾಕ್ಷ್ಯಾಧಾರಗಳಿಲ್ಲದ ಕಾರಣ ಹೆಣ್ಣುಮಕ್ಕಳ ಕಳ್ಳಸಾಗಣೆ ಸಂಬಂಧ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.

ಗೃಹ ಸಚಿವ ಅರಗ ಜ್ಞಾನೇಂದ್ರ ಮತ್ತು ಸ್ಯಾಂಟ್ರೋ ರವಿ ಅವರು ಅಹಮದಾಬಾದ್‌ನ ಹತ್ತಿರದ ಹೋಟೆಲ್‌ಗಳಲ್ಲಿ ಉಳಿದುಕೊಂಡಿದ್ದರು. ಗೃಹ ಸಚಿವರು ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದರೆಂದು ಹೇಳಲಾಗುತ್ತಿದೆ. ಹಾಗಿದ್ದರೆ, ಆರೋಪಿಗೆ ವಿಮಾನ ಟಿಕೆಟ್‌ಗಳನ್ನು ಯಾರು ಕಾಯ್ದಿರಿಸಿದ್ದರು ಎಂಬುದನ್ನು ತಿಳಿಯಬೇಕಿದೆ ಎಂದು ತಿಳಿಸಿದ್ದಾರೆ.

ಪೊಲೀಸರು ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದಾಗ ಸ್ಯಾಂಟ್ರೋ ರವಿ ಪುಣೆಯಿಂದ ಅಹಮದಾಬಾದ್‌ಗೆ ಹೇಗೆ ವಿಮಾನದಲ್ಲಿ ಪ್ರಯಾಣ ಬೆಳೆಸಿದರು ಎಂಬುದಕ್ಕೂ ಸರ್ಕಾರ ಉತ್ತರಿಸಬೇಕು. 13 ಸಚಿವರು ಸೇರಿದಂತೆ 47 ಬಿಜೆಪಿ ಶಾಸಕರು ಕ್ರಿಮಿನಲ್ ಆರೋಪ ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com