ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಬೊಮ್ಮಾಯಿ: ಕಾಂಗ್ರೆಸ್ ವ್ಯಂಗ್ಯ

ಬಸವರಾಜ ಬೊಮ್ಮಾಯಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಎಂದು ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ.
ಖಾಲಿ ಕುರ್ಚಿಗಳ ಚಿತ್ರ
ಖಾಲಿ ಕುರ್ಚಿಗಳ ಚಿತ್ರ
Updated on

ಬೆಂಗಳೂರು: ರಾಜ್ಯ ವಿಧಾನಸಭಾ  ಚುನಾವಣೆ ಸನ್ನಿಹದಲ್ಲಿರುವಂತೆ, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇನ್ನೂ ಅಧಿಕೃತವಾಗಿ  ಚುನಾವಣೆ ಘೋಷಣೆಯಾಗದಿದ್ದರೂ ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿವೆ.

ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿ ಗೆದ್ದು ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಈ ನಿಟ್ಟಿನಲ್ಲಿ ವಾಕ್ ಸಮರ ಬಿರುಸಾಗಿ ಸಾಗಿದ್ದು, ಪರಸ್ಪರ, ಆರೋಪ- ಪ್ರತ್ಯಾರೋಪ, ಟೀಕೆ-ವ್ಯಂಗ್ಯಗಳು ಹೆಚ್ಚಾಗಿವೆ.

ಬಸವರಾಜ ಬೊಮ್ಮಾಯಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಎಂದು ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತ ವಿಡಿಯೋವೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, ಕನಿಷ್ಠ ನಾಲ್ಕು ಜನಪರ ಕೆಲಸ ಮಾಡದ ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ ಎನ್ನುವುದಕ್ಕೆ ಪ್ರತಿ ಸಮಾರಂಭದಲ್ಲೂ ಕಾಣುವ ಖಾಲಿ ಕುರ್ಚಿಗಳೇ ಸಾಕ್ಷಿ ಎಂದು ಅಣಕವಾಡಿದೆ.

ಕುರ್ಚಿಗಳಿಗೆ ಜೀವವಿದ್ದಿದ್ದರೆ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರಕ್ಕೆ ಬೇಸತ್ತು ಎದ್ದು ಹೊರಡುತ್ತಿದ್ದವು ಎಂದು ಟೀಕಿಸಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com