ಕರ್ತವ್ಯದ ಅರಿವು ಇಲ್ಲದ್ದರಿಂದಲೇ ಹೀನಾಯ ಸೋಲು; ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ: ಪ್ರಿಯಾಂಕ್ ಖರ್ಗೆ

ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ .
ಪ್ರಿಯಾಂಕ್ ಖರ್ಗೆ
ಪ್ರಿಯಾಂಕ್ ಖರ್ಗೆ
Updated on

ಬೆಂಗಳೂರು: ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು,  ನಾನು ನನ್ನ ಪಕ್ಷದ ವಕ್ತಾರನಾಗಿದ್ದೇನೆ, ಜನರ ಆಶೀರ್ವಾದದಿಂದ ಸಚಿವ ಸ್ಥಾನದ ಜವಾಬ್ದಾರಿ ಹೊತ್ತಿದ್ದೇನೆ, ಸರ್ಕಾರದ ಪರವಾಗಿ, ನಾಡಿನ ಜನರ ಪರವಾಗಿ ಕೆಲಸ ಮಾಡುವುದು ನನ್ನ ಕರ್ತವ್ಯವಾಗಿದೆ ಎಂದು ಟ್ವೀಟ್ ನಲ್ಲಿ ಬರೆದು ಕೊಂಡಿದ್ದಾರೆ.

ಬಿಜೆಪಿಗರಿಗೆ ಕರ್ತವ್ಯದ ಬಗ್ಗೆ ಅಜ್ಞಾನವಿದ್ದರೆ ನಾನು ಹೊಣೆಗಾರನಲ್ಲ! ಬಿಜೆಪಿಗೆ ಕರ್ತವ್ಯದ ಅರಿವು ಇಲ್ಲದಿದ್ದರಿಂದಲೇ ಹೀನಾಯ ಸೋಲಿಗೆ ಗುರಿಯಾಗಿದ್ದು ಎಂದು ಲೇವಡಿ ಮಾಡಿರುವ ಪ್ರಿಯಾಂಕ್ ,ಬಿಜೆಪಿ ಆಡಳಿತದ ಇಬ್ಬರು ಮುಖ್ಯಮಂತ್ರಿಗಳ ಅವಧಿಯಲ್ಲಿ ಯಾರು ಶಾಡೋ ಸಿಎಂ ಆಗಿದ್ದರು, ಯಾರು ಸೂಪರ್ ಸಿಎಂ ಆಗಿದ್ದರು ಎನ್ನುವುದು ಜಗತ್ತಿಗೆ ತಿಳಿದ ವಿಚಾರ, ಬಿಜೆಪಿಗೆ ತಿಳಿದಿಲ್ಲವೆಂದರೆ ಯತ್ನಾಳರ ಹಾಗೂ ರೇಣುಕಾಚಾರ್ಯರ ಮಾತುಗಳನ್ನು ರಿವೈಂಡ್ ಮಾಡಿ ಕೇಳಿಸಿಕೊಳ್ಳಲಿ ಎಂದು ಟಾಂಗ್ ನೀಡಿದ್ದಾರೆ.

ಸೋತು ವಿರೋಧ ಪಕ್ಷದಲ್ಲಿ ಕೂತಿದ್ದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡುವ ಕನಿಷ್ಠ ಹೊಣೆಗಾರಿಕೆ ಪ್ರದರ್ಶಿಸಲು ಸಾಧ್ಯವಾಗಿಲ್ಲ ಬಿಜೆಪಿಗೆ. ಅಧಿವೇಶನ ಶುರುವಾಗಿ, ರಾಜ್ಯಪಾಲರ ಭಾಷಣವಾಗಿ,ಬಜೆಟ್ ಮಂಡನೆಯಾಗಿ, ಬಜೆಟ್ ಮೇಲಿನ ಚರ್ಚೆಯೂ ಆಯ್ತು, ಆದರೆ ಒಬ್ಬ ವಿರೋಧ ಪಕ್ಷದ ನಾಯಕ ಸಿಗದಿರುವುದು ಬಿಜೆಪಿಯ ರಾಜಕೀಯ ಹಾಗೂ ನೈತಿಕ ದಿವಾಳಿತನಕ್ಕೆ ಸಾಕ್ಷಿ.

ಹೈಕಮಾಂಡ್ ನಾಯಕರಿಂದ ತಿರಸ್ಕಾರಕ್ಕೊಳಪಟ್ಟ ಬಿಜೆಪಿ ಕರ್ನಾಟಕ ವಿಪಕ್ಷ ನಾಯಕನ ಆಯ್ಕೆಯ ವಿಚಾರದಲ್ಲಿ ಬೊಗಸೆಯಷ್ಟಾದರೂ ಗೌರವವನ್ನು ಪಡೆದು ಬಂದ ನಂತರ ನನ್ನ ಬಗ್ಗೆ ಮಾತಾಡಲಿ ಎಂದು ತಿವಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com