10 ಬಿಜೆಪಿ ಶಾಸಕರ ಅಮಾನತು: ಇಂದು ಬಿಜೆಪಿ ಶಾಸಕಾಂಗ ಸಭೆ, ಜೆಡಿಎಸ್ ನಿಂದಲೂ ಸಭೆ

ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. 
ಬಿಜೆಪಿ ಶಾಸಕರ ಪ್ರತಿಭಟನೆ
ಬಿಜೆಪಿ ಶಾಸಕರ ಪ್ರತಿಭಟನೆ
Updated on

ಬೆಂಗಳೂರು: ವಿಧಾನಸಭೆಯಲ್ಲಿ(Karnataka Assembly Session) ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇಂದು ಗುರುವಾರ ಬೆಳಗ್ಗೆ 10 ಗಂಟೆಗೆ ಬಿಜೆಪಿ ಶಾಸಕಾಂಗ ಸಭೆ ಕರೆಯಲಾಗಿದೆ. 

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ(BJP) ರಾಜ್ಯ ಕಚೇರಿಯಲ್ಲಿ ಶಾಸಕರು,ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗಿದೆ. ಪ್ರತಿಭಟನೆ ವಿಚಾರವಾಗಿ ಮುಂದಿನ ನಡೆ ಬಗ್ಗೆ ಚರ್ಚೆ ನಡೆಯಲಿದೆ. 

ಜೆಡಿಎಸ್ ಶಾಸಕಾಂಗ ಸಭೆ: ಇನ್ನೊಂದೆಡೆ ಜೆಡಿಎಸ್(JDS) ಕೂಡ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ವಿಧಾನಸೌಧದ ಜೆಡಿಎಸ್‌ ಕಚೇರಿಯಲ್ಲಿ ಇಂದು ಬೆಳಗ್ಗೆ ಸಭೆ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com