ಜೆಡಿಎಸ್, ಬಿಜೆಪಿ ಹೊಂದಾಣಿಕೆ 'ಕುರುಡನ ಹೆಗಲ ಮೇಲೆ ಕುಂಟನ ಸವಾರಿ'ಯಂತೆ: ಕಾಂಗ್ರೆಸ್ ಲೇವಡಿ

ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಾಗೂ ಎನ್ ಡಿಎಗೆ ಜೆಡಿಎಸ್ ಸೇರ್ಪಡೆಗೊಳ್ಳಲಿದೆ ಎಂಬ ಮಾತುಗಳು  ರಾಜಕೀಯ ವಲಯದಲ್ಲಿ ಇತ್ತೀಚಿಗೆ ಕೇಳಿಬರುತ್ತಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಹಾಗೂ ಎನ್ ಡಿಎಗೆ ಜೆಡಿಎಸ್ ಸೇರ್ಪಡೆಗೊಳ್ಳಲಿದೆ ಎಂಬ ಮಾತುಗಳು  ರಾಜಕೀಯ ವಲಯದಲ್ಲಿ ಇತ್ತೀಚಿಗೆ ಕೇಳಿಬರುತ್ತಿವೆ.

ಇದಕ್ಕೆ ಇಂಬು ನೀಡುವಂತೆ ಶನಿವಾರ ಜೆಡಿಎಸ್ ಶಾಸಕಾಂಗ ಕಚೇರಿಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಹಾಗೂ ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿ ನಡೆಸುವ ಮೂಲಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಕುರುಡುನ ಹೆಗಲ ಮೇಲೆ ಕುಂಟನ ಸವಾರಿಯಂತಿದೆ. ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ ಎಂದು ಲೇವಡಿ ಮಾಡಿದೆ.

ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಕಿಡಿಕಾರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com