ಯಾವತ್ತೂ ಪಕ್ಷದ ಟಿಕೆಟ್ ಕೇಳಿಲ್ಲ, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತೆ: ತೇಜಸ್ವಿನಿ ಅನಂತ್ ಕುಮಾರ್

ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ ಕೇವಲ ಸೌಜನ್ಯದ ಭೇಟಿಯಾಗಿದೆ. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಾನು ಎಂದಿಗೂ ಪಕ್ಷದ ಟಿಕೆಟ್ ಕೇಳಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ಕುಮಾರ್ ಭಾನುವಾರ ಹೇಳಿದ್ದಾರೆ. 
ತೇಜಸ್ವಿನಿ ಅನಂತ್ ಕುಮಾರ್
ತೇಜಸ್ವಿನಿ ಅನಂತ್ ಕುಮಾರ್
Updated on

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ ಕೇವಲ ಸೌಜನ್ಯದ ಭೇಟಿಯಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತ್‌ಕುಮಾರ್ ಭಾನುವಾರ ಹೇಳಿದ್ದಾರೆ. 

ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ನಾನು ಎಂದಿಗೂ ಪಕ್ಷದ ಟಿಕೆಟ್ ಕೇಳಿಲ್ಲ ಮತ್ತು ಯಾವುದೇ ಪ್ರತಿಫಲವನ್ನು ನಿರೀಕ್ಷಿಸದೆ ಪಕ್ಷದ ನಿಷ್ಠಾವಂತ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು.

ಪಕ್ಷದ ಟಿಕೆಟ್ ಪಡೆಯುವ ಆಕಾಂಕ್ಷೆಯಿಂದ ಕೆಲಸ ಮಾಡಬಾರದು. ನಾನು ನನ್ನ ಪತಿ ಅನಂತ್ ಕುಮಾರ್ ಅವರ ಹಾದಿಯನ್ನೇ ಅನುಸರಿಸುತ್ತಿದ್ದೇನೆ. ಪ್ರಧಾನಿಯವರೊಂದಿಗಿನ ನನ್ನ ಭೇಟಿಯು ಸೌಜನ್ಯದ ಭೇಟಿಯಾಗಿತ್ತು. ನಾನು 2024ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೇಳಿಲ್ಲ... ಪಕ್ಷದ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ಹೇಳಿದರು.

ಇತ್ತೀಚೆಗೆ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯು ತನ್ನ ಪತಿ ನಿಧನದ ನಂತರ ನಡೆದ ಮೊದಲ ಚುನಾವಣೆಯಾಗಿದೆ ಎಂದು ಅವರು ಹೇಳಿದರು. 

ವಿರೋಧ ಪಕ್ಷದ ನಾಯಕರ ನೇಮಕಕ್ಕೆ ಬಿಜೆಪಿ ವಿಳಂಬ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅರ್ಹ ನಾಯಕನನ್ನು ನೇಮಿಸಲಾಗುವುದು. ಪಕ್ಷದ ರಾಜ್ಯ ಉಪಾಧ್ಯಕ್ಷೆಯಾಗಿರುವ ನಾನು ಸೈದ್ಧಾಂತಿಕವಾಗಿ ಬಿಜೆಪಿಯ ಪರವಾಗಿದ್ದೇನೆ ಮತ್ತು ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದರು. 

ಇದಕ್ಕೂ ಮುನ್ನ ಮೈಸೂರಿನಲ್ಲಿ ‘ಕುರುಕ್ಷೇತ್ರ’ ಎಂಬ ಸಂಪೂರ್ಣ ಮಹಿಳಾ ನಾಟಕವನ್ನು ತೇಜಸ್ವಿನಿ ಉದ್ಘಾಟಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com