ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕರ ನೈತಿಕ ಸ್ಥೈರ್ಯ ಹೆಚ್ಚಿಸಿದ ಸಿಎಲ್‌ಪಿ ಸಭೆ!

ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಸಂಪೂರ್ಣ ಬೆಂಬಲದೊಂದಿಗೆ ಪಕ್ಷದಲ್ಲಿ ತಾವೇ ಉನ್ನತ ಮಟ್ಟದ ನಾಯಕ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಸಿಎಲ್‌ಪಿ ಸಭೆ ನಡೆಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಆಳಂದ ಶಾಸಕ ಬಿ.ಆರ್. ಪಾಟೀಲ್ ನೇತೃತ್ವದ ಶಾಸಕರು ಪತ್ರ ಬರೆದಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ಸಭೆ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗರ ಸಂಪೂರ್ಣ ಬೆಂಬಲದೊಂದಿಗೆ ಪಕ್ಷದಲ್ಲಿ ತಾವೇ ಉನ್ನತ ಮಟ್ಟದ ನಾಯಕ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಲ್ಲದೆ, ಸಿಎಲ್‌ಪಿ ಸಭೆ ನಡೆಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದ ಆಳಂದ ಶಾಸಕ ಬಿ.ಆರ್. ಪಾಟೀಲ್ ನೇತೃತ್ವದ ಶಾಸಕರು ಪತ್ರ ಬರೆದಿದ್ದಕ್ಕಾಗಿ ಕ್ಷಮೆಯಾಚಿಸಿದರು.

'ಈ ವಿಚಾರವಾಗಿ ಪತ್ರ ಬರೆಯುವುದು ಸರಿಯಲ್ಲ. ಇದು ಸಹಿ ಅಭಿಯಾನದಂತೆ ತೋರುತ್ತಿದೆ ಮತ್ತು ಅವರು ಮೌಖಿಕವಾಗಿ ನನಗೆ ಕೇಳಿದ್ದರೂ ನಾನು ಅವರ ಮನವಿಗೆ ಸ್ಪಂದಿಸುತ್ತಿದ್ದೆ. ಪತ್ರ ಬರೆಯುವ ಪದ್ಧತಿ ನಿಲ್ಲಬೇಕು ಎಂದು ಮುಖ್ಯಮಂತ್ರಿ ಅವರಿಗೆ ಹೇಳಿದರು. 

ಸಹಿ ಅಭಿಯಾನ ನಡೆಸಲು ಬಯಸುವುದಿಲ್ಲ ಎಂದು ಹೇಳಿ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಆರ್ ಪಾಟೀಲ್ ನೇತೃತ್ವದ ಶಾಸಕರು ಕ್ಷಮೆಯಾಚಿಸಿದ್ದಾರೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಜಿಲ್ಲಾವಾರು ಶಾಸಕರನ್ನು ಭೇಟಿ ಮಾಡುವುದಾಗಿ ಮುಖ್ಯಮಂತ್ರಿಗಳು ಶಾಸಕರಿಗೆ ಭರವಸೆ ನೀಡಿದರು ಎಂದು ಪರಮೇಶ್ವರ ಹೇಳಿದರು.

2013ರಿಂದ 2018ರ ಅವಧಿಯಲ್ಲಿ ಸಿದ್ದರಾಮಯ್ಯನವರು ಶಾಸಕರ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಇದೇ ತಂತ್ರವನ್ನು ಅನುಸರಿಸಿದ್ದರು. ಈ ಬಾರಿಯೂ ಸಹ, ಸಚಿವರು ತಮ್ಮನ್ನು ನಿರಾಸೆಗೊಳಿಸುತ್ತಿದ್ದಾರೆ ಎಂಬ ಶಾಸಕರ ಕಳವಳವನ್ನು ಪರಿಹರಿಸಲು ಅವರು ಶೀಘ್ರವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ. 

ಬಿಆರ್ ಪಾಟೀಲ್ ಹಾಗೂ ಪತ್ರಕ್ಕೆ ಸಹಿ ಹಾಕಿರುವ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಇಬ್ಬರೂ ಸಿದ್ದರಾಮಯ್ಯ ಅವರ ಅನುಯಾಯಿಗಳು ಎಂಬುದು ಕುತೂಹಲ ಮೂಡಿಸಿದೆ. ಈ ಇಬ್ಬರೂ ಬೇರೆ ಪಕ್ಷಗಳಿಂದ ಕಾಂಗ್ರೆಸ್ ಸೇರಿದ್ದರು.

ಶುಕ್ರವಾರ ಬೆಳಗ್ಗೆ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಇದೇ ವೇಳೆ, ಸಿದ್ದರಾಮಯ್ಯನವರ ಕಟ್ಟಾ ಬೆಂಬಲಿಗರಾದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ತಾವು ಸದ್ಯಕ್ಕೆ ಇಲ್ಲ ಎಂದು ಹೇಳಿಕೆ ನೀಡಿದ್ದು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಬೆಂಬಲಿಸುವುದಾಗಿ ಸೂಚಿಸಿದ್ದಾರೆ.

ಸಿಂಗಾಪುರದಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದ ಸಂದರ್ಭದಲ್ಲಿ ನಡೆದಿರುವ ಸಿಎಲ್‌ಪಿ ಸಭೆ ಕಾಂಗ್ರೆಸ್ ನಾಯಕರು ಮತ್ತು ಸಿದ್ದರಾಮಯ್ಯನವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. 

ಸಿದ್ದರಾಮಯ್ಯ ಅವರು ಸೋಮವಾರದಿಂದ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಆರಂಭಿಸುತ್ತಿದ್ದು, ಈಗಾಗಲೇ ಹಾವೇರಿ ಜಿಲ್ಲೆಯಲ್ಲಿದ್ದಾರೆ. ವಿರೋಧ ಪಕ್ಷಗಳು ಅದರಲ್ಲೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದಂತೆ ಹಣ ವರ್ಗಾವಣೆ ವಿವಾದದ ನಡುವೆಯೇ ಅಧಿಕಾರವನ್ನು ಹಿಡಿತಕ್ಕೆ ತೆಗೆದುಕೊಳ್ಳುವುದು ಅವರ ಉದ್ದೇಶವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com