ಬಿಜೆಪಿಯೊಳಗಿನ 'ದ್ರೋಹಿಗಳೇ' ಕಾಂಗ್ರೆಸ್ ಗೆಲುವಿಗೆ ಕಾರಣ: ಗೋಕಾಕ ಶಾಸಕ ರಮೇಶ ಜಾರಕಿಹೊಳಿ

ಬಿಜೆಪಿಯೊಳಗಿನ ದೇಶದ್ರೋಹಿಗಳ ಕುತಂತ್ರ ಕಾಂಗ್ರೆಸ್‌ಗೆ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ತಂದುಕೊಟ್ಟಿದೆ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ. 
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಳಗಾವಿ: ಬಿಜೆಪಿಯೊಳಗಿನ ದ್ರೋಹಿಗಳ ಕುತಂತ್ರ ಕಾಂಗ್ರೆಸ್‌ಗೆ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ತಂದುಕೊಟ್ಟಿದೆ ಎಂದು ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದ್ದಾರೆ. 

ಶನಿವಾರ ಸಂಜೆ ಅಥಣಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಹಲವು ಮುಖಂಡರು ಪರೋಕ್ಷವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು, ಇದು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಯ ಸೋಲಿಗೆ ಕಾರಣವಾಯಿತು ಎಂದು ದೂರಿದರು.

ಕಾಂಗ್ರೆಸ್‌ನ ಚುನಾವಣಾ ಪೂರ್ವ ಗ್ಯಾರಂಟಿಗಳು ಮತ್ತು ಮೀಸಲಾತಿ ನೀತಿಯ ಮೇಲಿನ ನಿಲುವು ಚುನಾವಣೆಯಲ್ಲಿ ಆ ಪಕ್ಷವನ್ನು ಗೆಲ್ಲಲು ಸಹಾಯ ಮಾಡಿದೆ. ಈ ಮಹಾ ಗೆಲುವು ಕಾಂಗ್ರೆಸ್‌ಗೆ ಆಶ್ಚರ್ಯ ಉಂಟುಮಾಡಿದೆ. ಆದರೆ, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಗ್ಯಾರಂಟಿಗಳು ಕೊನೆಗೊಳ್ಳಲಿದೆ ಎಂದು ಭವಿಷ್ಯ ನುಡಿದರು.

ಸೋಲಿನ ಹಿಂದಿನ ಕಾರಣಗಳನ್ನು ಬಿಚ್ಚಿಡಲೆಂದೇ ನಾನು ಮತ್ತು ನನ್ನ ಸಹೋದರ ಬಾಲಚಂದ್ರ ಅವರು ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಬಿಜೆಪಿ ಸಭೆಗಳಿಗೆ ಹಾಜರಾಗಲಿಲ್ಲ. ಏಕೆಂದರೆ, 'ನಾನು ಬಹಿರಂಗವಾಗಿ ಇಂತಹ ಹೇಳಿಕೆಗಳನ್ನು ನೀಡಿದರೆ, ಅನೇಕ ಬಿಜೆಪಿ ನಾಯಕರು ಅಸಮಾಧಾನಗೊಳ್ಳುತ್ತಾರೆ' ಎಂದರು.

ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಹೈಕಮಾಂಡ್ ಜೊತೆ ನೇರವಾಗಿ ಚರ್ಚಿಸುತ್ತೇನೆ. ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಮುನ್ನ ಪಕ್ಷವನ್ನು ಬಲಪಡಿಸುವತ್ತ ಸಂಪೂರ್ಣ ಗಮನ ಹರಿಸಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com