ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ: ಬಿವೈ ವಿಜಯೇಂದ್ರ

ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ.
ಬಿವೈ ವಿಜಯೇಂದ್ರ
ಬಿವೈ ವಿಜಯೇಂದ್ರ
Updated on

ಬೆಂಗಳೂರು: ರಾಜ್ಯದಲ್ಲಿ ಮಳೆ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ ಅವರು ಕಾಂಗ್ರೆಸ್ ಕಾಲೆಳೆದಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ. ವರುಣನ ಅವಕೃಪೆ ಇಡೀ ರಾಜ್ಯವನ್ನಾವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರದಿಂದ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ, ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com